
ತುಮಕೂರು, (ಜ.01): ಪ್ರಸಕ್ತ ಸಾಲಿನ ಶಾಲಾ-ಕಾಲೇಜು ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯು ಚನ್ನರಾಯಪಟ್ಟಣ ತಾಲೂಕಿನ ಚೀಚಗೊಂಡನಹಳ್ಳಿ ಗ್ರಾಮದವ. ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಲ್ಲಿ ಮುಚ್ಚಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಅಂದರೆ ಹೊಸ ವರ್ಷ(2021)ದ ಮೊದಲ ದಿನವಾದ ಶುಕ್ರವಾರ ಪುನಾರಂಭಗೊಂಡಿದೆ.
ಶಾಲಾ-ಕಾಲೇಜುಗಳು ಆರಂಭ: ವಿದ್ಯಾರ್ಥಿಗಳಿಗೆ ವಿಶೇಷ ಸ್ವಾಗತ ಕೋರಿದ ಶಿಕ್ಷಕರು
ಈ ಹಿನ್ನೆಲೆಯಲ್ಲಿ ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿ ಶಶಾಂಕ್ (20) ಕಾಲೇಜಿಗೆ ಬರುತ್ತಿದ್ದ. ಮಾರ್ಗಮಧ್ಯೆ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಶಶಾಂಕ್ ಮೃತಪಟ್ಟಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ