ಕ್ಲಾಸ್‌ರೂಮ್‌ನಲ್ಲಿಯೇ ಟೀಚರ್‌ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ

Published : Jul 07, 2024, 02:09 PM ISTUpdated : Jul 07, 2024, 02:32 PM IST
ಕ್ಲಾಸ್‌ರೂಮ್‌ನಲ್ಲಿಯೇ ಟೀಚರ್‌ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ

ಸಾರಾಂಶ

ಹೊರಗಡೆ ಹೋಗಲು ಒಪ್ಪದಿದ್ದಾಗ, ಸರ್ ಜೋರಾಗಿ ಗದರಿ ಹೇಳಿದರು. ಆಗ ಚಾಕು ತೆಗೆದು ಸರ್‌ಗೆ ಚುಚ್ಚಿದನು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. 

ದಿಸ್ಪುರ: ಕ್ಲಾಸ್‌ ರೂಮ್‌ನಲ್ಲಿಯೇ ವಿದ್ಯಾರ್ಥಿಯೋರ್ವ ಟೀಚರ್‌ಗೆ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಅಸ್ಸಾಂ ರಾಜ್ಯದ ಶಿವಸಾಗರ ಜಿಲ್ಲೆಯ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಚಾಕು ಇರಿತಕ್ಕೊಳಗಾದ ಶಿಕ್ಷಕ ರಾಜೇಂದ್ರ ಬಾಬು ಮೃತರಾಗಿದ್ದಾರೆ. ಕ್ಲಾಸ್‌ರೂಮ್‌ನಲ್ಲಿ ಕ್ಯಾಸೂಲ್ ಬಟ್ಟೆ ಧರಿಸುವಂತೆ ಹೇಳಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತರಗತಿ ಕೊಠಡಿಯಲ್ಲಿ ಕೊಲೆ ಆಗಿರೋದರಿಂದ ವಿದ್ಯಾರ್ಥಿಗಳೆಲ್ಲಾ ಆತಂಕದಲ್ಲಿದ್ದಾರೆ. 

ಶನಿವಾರ ಮಧ್ಯಾಹ್ನ 3.15ಕ್ಕೆ ಕೊಲೆಯಾಗಿದೆ. ಚಾಕು ಇರಿತಕ್ಕೊಳಗಾಗಿದ್ದ ಶಿಕ್ಷಕ ರಾಜೇಂದ್ರ ಬಾಬು ಅವರನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಶಿಕ್ಷಕ ಮೃತರಾಗಿರೋದನ್ನು ಘೋಷಿಸಿದ್ದಾರೆ. ಕೊಲೆ ಸಂಬಂಧ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮೊಯಿದುಲ್ ಇಸ್ಲಾಂ ಹೇಳಿದ್ದಾರೆ. ಆರೋಪಿ ವಿದ್ಯಾರ್ಥಿ 11ನೇ ತರಗತಿ ಓದುತ್ತಿದ್ದನು.

ಇನ್ನು ಕೊಲೆ ಮಕ್ಕಳ ಮುಂದೆಯೇ ನಡೆದಿದ್ದು, ಕೆಲ ವಿದ್ಯಾರ್ಥಿಗಳು ಮಾಧ್ಯಮಗಳ ಮುಂದೆ ಘಟನೆಯನ್ನು ವಿವರಿಸಿದ್ದಾರೆ. ರಾಜೇಂದ್ರ ಬಾಬು ಕ್ಲಾಸ್ ನಡೆಯುತ್ತಿತ್ತು. ಕ್ಯಾಸುಲ್ ಡ್ರೆಸ್ ಹಾಕದಿದ್ದಕ್ಕೆ ಆತನನ್ನು ಹೊರಗೆ ಹೋಗುವಂತೆ ಸಮಾಧಾನದಿಂದಲೇ ಹೇಳಿದರು. ಆದ್ರೆ ಅವನು ಹೊರಗಡೆ ಹೋಗಲು ಒಪ್ಪದಿದ್ದಾಗ, ಸರ್ ಜೋರಾಗಿ ಗದರಿ ಹೇಳಿದರು. ಆಗ ಚಾಕು ತೆಗೆದು ಸರ್‌ಗೆ ಚುಚ್ಚಿದನು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. 

ಆತನ ಬಳಿ ಹರಿತವಾದ ಆಯುಧ ಇದೆ ಎಂಬ ವಿಷಯ ನಮಗೆ ಗೊತ್ತೇ ಇರಲಿಲ್ಲ. ಶಿಕ್ಷಕರು ಬೈದಿದ್ದಕ್ಕೆ ಚಾಕು ಹೊರಗೆ ತೆಗೆದು ತಲೆಗೆ ಚುಚ್ಚಿದನು. ಗಾಯದಿಂದ ಶಿಕ್ಷಕರು ಕೆಳಗೆ ಬಿದ್ದರು. ಕ್ಲಾಸ್‌ರೂಮ್‌ನಲ್ಲಿ ರಕ್ತ ಹರಿಯಿತು. ನಮ್ಮ ಗಲಾಟೆ ಕೇಳಿ ಪಕ್ಕದ ಕ್ಲಾಸ್‌ರೂಮ್ ಶಿಕ್ಷಕರು ಬಂದರು ಎಂದು ಪ್ರತ್ಯಕ್ಷದರ್ಶಿಗಳು ಘಟನೆಯನ್ನು ವಿವರಿಸಿದ್ದಾರೆ. 

ರಾತ್ರಿ ಮಹಿಳೆಯಿಂದ ಬಂತು ಫೋನ್ ಕಾಲ್; ಕಾಡು ಸೇರಿ, ನನ್ನಿಂದ ಆಗಲ್ಲ ಎಂದು ವಿಷ ಕುಡಿದ ಯುವಕ

ಬೆಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್‌ಗೆ ಚಾಕು ಇರಿದಿದ್ದ ವಿದ್ಯಾರ್ಥಿ

ಮದ್ಯ ಸೇವಿಸಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ತಡೆದ ಕಾರಣಕ್ಕೆ ಕೋಪಗೊಂಡು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್‌ ಎದೆಗೆ ಚಾಕುವಿನಿಂದ ಇರಿದು ವಿದ್ಯಾರ್ಥಿಯೊಬ್ಬ ಹತ್ಯೆಗೈದಿರುವ ದಾರುಣ ಘಟನೆ ಹೆಬ್ಬಾಳ ಸಮೀಪ ಖಾಸಗಿ ಕಾಲೇಜಿನ ‍ಆ‍ವರಣದಲ್ಲಿ ಬುಧವಾರ ನಡೆದಿತ್ತು. ಯಲಹಂಕ ನಿವಾಸಿ ಜೈ ಕಿಶೋರ್ ರೈ (45) ಮೃತ ದುರ್ದೈವಿ. 

ಹತ್ಯೆ ಸಂಬಂಧ ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಅಸ್ಸಾಂ ಮೂಲದ ಭಾರ್ಗವ್ ಬರ್ಬನ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರ್ಗವ್ ಬಂದಾಗ ಈ ಕೃತ್ಯ ನಡೆದಿದೆ. ಭಾರ್ಗವ್‌, ಕಾಲೇಜಿನ ಸಮೀಪದಲ್ಲಿ ಪಿಜಿಯಲ್ಲಿ ನೆಲೆಸಿದ್ದನು. ಮೃತ ಜೈ ಕಿಶೋರ್ ರೈ ಕಳೆದ ಏಳೆಂಟು ವರ್ಷಗಳಿಂದ ಇಲ್ಲಿ ಕೆಲಸ ಮಾಡಿಕೊಂಡಿದ್ದನು.

ಕೈಯಲ್ಲಿ ಮದರಂಗಿ, ಪ್ರೀತಿಸಿದವನೊಂದಿಗೆ ಮದುವೆ ಫಿಕ್ಸ್; ಆದ್ರೂ ನೇಣಿಗೆ ಕೊರಳೊಡ್ಡಿದ ವಧು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ