Instagramನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಪೋಸ್ಟ್ ಪ್ರಕರಣ; ದೂರು ದಾಖಲಾಗ್ತಿದ್ದಂತೆ ಅಲರ್ಟ್ ಆದ ಕಿರಾತಕರು!

Published : Aug 05, 2023, 10:40 AM ISTUpdated : Aug 05, 2023, 11:33 AM IST
Instagramನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಪೋಸ್ಟ್ ಪ್ರಕರಣ; ದೂರು ದಾಖಲಾಗ್ತಿದ್ದಂತೆ ಅಲರ್ಟ್ ಆದ ಕಿರಾತಕರು!

ಸಾರಾಂಶ

ಇನ್‌ಸ್ಟಾಗ್ರಾಮ್‌ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೊ ಅಪ್‌ಲೋಡ್ ಪ್ರಕರಣಕ್ಕೆ ಸಂಬಂಧ ದೂರು ದಾಖಲಾಗ್ತಿದ್ದಂತೆ ಕಿರಾತಕರು ಅಲರ್ಟ್ ಆಗಿದ್ದಾರೆ.

ಹುಬ್ಬಳ್ಳಿ (ಆ.5) : ಇನ್‌ಸ್ಟಾಗ್ರಾಮ್‌ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೊ ಅಪ್‌ಲೋಡ್ ಪ್ರಕರಣಕ್ಕೆ ಸಂಬಂಧ ದೂರು ದಾಖಲಾಗ್ತಿದ್ದಂತೆ ಕಿರಾತಕರು ಅಲರ್ಟ್ ಆಗಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದ ಪೋಸ್ಟ್ ಡಿಲಿಟ್ ಮಾಡಿದ್ದಾರೆ. kashmira1990_0 ಇನ್ ಸ್ಟಾ ಅಕೌಂಟ್ ನಲ್ಲಿ  ವಿದ್ಯಾರ್ಥಿನಿಯರ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್‌ ಮಾಡಿದ್ದರು. ಹುಬ್ಬಳ್ಳಿಯ ಸಮರ್ಥ ಕಾಲೇಜ್ ವಿದ್ಯಾರ್ಥಿನಿಯರ ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿದ್ದ ದುಷ್ಕರ್ಮಿಗಳು. ಅದನ್ನು ಕಾಲೇಜು ಇನ್‌ಸ್ಟಾಗ್ರಾಮ್ ಅಕೌಂಟ್‌ ನಲ್ಲೇ ಹ್ಯಾಕ್ ಮಾಡಿ ಹರಿಬಿಟ್ಟಿದ್ದರು. 

ಉಡುಪಿ ಪ್ರಕರಣ ಮಾಸುವ ಮುನ್ನವೇ ಹುಬ್ಬಳೀಲಿ ವಿದ್ಯಾರ್ಥಿನಿ ಅಶ್ಲೀಲ ಫೋಟೊ ಅಪ್ಲೋಡ್!

ಈ ಪ್ರಕರಣ ಸಂಬಂಧ ನಿನ್ನೆ ಸಮರ್ಥ ಕಾಲೇಜ್(Samarth collage hubballi) ವಿದ್ಯಾರ್ಥಿನಿಯರು ಸೈಬರ್ ಕ್ರೈಮ್ ಪೊಲೀಸ್ ಠಾಣೆ(Cyber crime police station)ಯಲ್ಲಿ ದೂರು ದಾಖಲಿಸಿದ್ರು. ದೂರು ದಾಖಲಾಗ್ತಿದ್ದಂತೆ ಕಾಲೇಜ್ ಗೆ ಭೇಟಿ ನೀಡಿದ್ದ ಪೊಲೀಸರು. ದೂರು ದಾಖಲಾದ ಬೆನ್ನಲ್ಲೆ ಇನ್ ಸ್ಟಾ ದಲ್ಲಿ ಹಾಕಿರೋ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯ

ವಿದ್ಯಾರ್ಥಿನಿಯರ ಫೋಟೊ ಬಳಸಿಕೊಂಡು ಅಶ್ಲೀಲವಾಗಿ ಇನ್ಸ್‌ಟಾದಲ್ಲಿ ಅಪ್ಲೋಡ್ ಆಗುತ್ತಿರುವ ಬಗ್ಗೆ ಜೂನ್ 20 ರಿಂದಲೇ  ಕಾಲೇಜ್ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದ ವಿದ್ಯಾರ್ಥಿನಿಯರು. ಆದರೂ ಕಾಲೇಜ್ ಆಡಳಿತ ಮಂಡಳಿ ದೂರು ದಾಖಲಿಸದೇ ನಿರ್ಲಕ್ಷ್ಯ ವಹಿಸಿತ್ತು. ಸದ್ಯ ಆರೋಪಿಗಳ ಪತ್ತೆಗೆ ತಂಡ ರಚಿಸಿರುವ ಪೊಲೀಸರು. ಕಾಲೇಜು ವಿದ್ಯಾರ್ಥಿಗಳಿಂದಲೇ ಕೃತ್ಯ ನಡೆದಿರುವ ಬಗ್ಗೆ ಪೊಲೀಸರಿಗೆ ಅನುಮಾನ ಬಂದಿದೆ ಹೀಗಾಗಿ ಪ್ರಕರಣ ಸಂಬಂಧ ಹಲವು ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಿರುವ ಪೊಲಿಸರು. ಖಾಕಿ ಅಲರ್ಟ್ ಆಗುತ್ತಲೇ ಪೋಸ್ಟ್ ಡೀಲಿಟ್ ಮಾಡಿರೋ ಕಿಡಗೇಡಿ.

ಬೆಂಗಳೂರಿನಲ್ಲಿ ಅಮಾನುಷ ಘಟನೆ: ಬಾಲಕಿಯ ಮೇಲೆ 65 ವರ್ಷದ ಪ್ರಾಂಶುಪಾಲನಿಂದ ರೇಪ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!