
ಸೂರತ್ ( ಡಿ. 03) 32 ವರ್ಷದ ವೈದ್ಯರ ಮೇಲೆ ಹಲ್ಲೆ ನಡೆಸಿ ಲೂಟಿ ಮಾಡಿದ ಶಾಲಾ ಶಿಕ್ಷಕನನ್ನು ಬಂಧಿಸಲು ಪೊಲೀಸರು ತಂಡ ರಚನೆ ಮಾಡಿದ್ದಾರೆ.
ಆರೋಫಿ ಮನೋಜ್ ಧುದಗರ ಎಂದು ಡಾ ಅಜಯ್ ಮೊರಾಡಿಯಾಗೆ ಕಳೆದ ಕೆಲವು ತಿಂಗಳಿನಿಂದ ತನ್ನ ಹೆಂಡತಿ ತೂಕ ಕಡಿಮೆ ಮಾಡುವ ಚಿಕಿತ್ಸೆಗೆ ಹಣ ನೀಡುತ್ತಿದ್ದ. ಆದರೆ ಎಂಥದ್ದೆ ಚಿಕಿತ್ಸೆ ಮಾಡಿದರೂ ಹೆಂಡತಿಯ ತೂಕ ಕಡಿಮೆಯಾಗಲಿಲ್ಲ. ಇದರ ಪರಿಣಾಮ ಸಿಟ್ಟಿಗೆದ್ದ ಆರೋಪಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದು ಹಣ ವಾಪಸ್ ಕೊಡಲು ಕೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಸ್ಟ್ ನೈಟ್ ನಲ್ಲೇ ಎಡವಟ್ಟು; ಈ ಗಂಡ ಬೇಡ ಎಂದು ಪತ್ನಿ
ಕಬ್ಬಿಣದ ಬ್ಲೇಡ್ ಒಂದನ್ನು ತೆಗೆದುಕೊಂಡು ಡಾಕ್ಟರ್ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಡಾಕ್ಟರ್ ಬಳಿ ಇದ್ದ 1,500 ರೂ. ಲೂಟಿ ಮಾಡಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ವೈದ್ಯರ ಗಂಟಲಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲ್ಲೆ ಮಾಡಿ ಪರಾರಿಯಾಗಿರುವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ