ಸ್ಪೋಟ ಸಂಚು ವಿಫಲ: ಬೆಂಗ್ಳೂರಲ್ಲಿ ಶಂಕಿತ ಉಗ್ರ ಅರೆಸ್ಟ್‌

Published : Sep 27, 2024, 04:44 AM IST
ಸ್ಪೋಟ ಸಂಚು ವಿಫಲ: ಬೆಂಗ್ಳೂರಲ್ಲಿ ಶಂಕಿತ ಉಗ್ರ ಅರೆಸ್ಟ್‌

ಸಾರಾಂಶ

ಸಂಚು ವಿಫಲವಾದ ಹಿನ್ನೆಲೆಯಲ್ಲಿ ಶಂಕಿತ ಉಗ್ರ ಗಿರೀಶ್ ತಲೆಮರೆಸಿಕೊಂಡಿದ್ದ. ಈತನ ಬೆನ್ನು ಬಿದ್ದಿದ್ದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಗಿರೀಶ್ ಬೆಂಗಳೂರಿನ ಹೊರವಲಯದ ಆನೇಕಲ್ ಸಮೀಪ ಜಿಗಣಿಯಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಸ್ಥಳೀಯ ಪೊಲೀಸರ ನೆರವು ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಬೆಂಗಳೂರು(ಸೆ.27): ಅಸ್ಸಾಂನ ಗುವಾಟಿಯಲ್ಲಿ ವಿಧ್ವಂಸಕ ಕೃತ್ಯದ ಸಂಚು ಪ್ರಕರಣ ಸಂಬಂಧ ನಿಷೇಧಿತ ಉಲ್ಫಾ (ಯುನೈಟೆಡ್ ಲಿಬಿರೇಷನ್ ಫ್ರಂಟ್ ಆಫ್ ಅಸ್ಸಾಂ) ಸಂಘಟನೆಯ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಅಧಿಕಾರಿಗಳು ಗುರುವಾರ ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ಬಂಧಿಸಿ ಕರೆದೊಯ್ದಿದ್ದಾರೆ.

ಗಿರೀಶ್ ಬರುವಾ ಅಲಿಯಾಸ್ ಗೌತಮ್ ಬರುವಾ(32) ಬಂಧಿತ ಶಂಕಿತ ಉಗ್ರ. ಉಲ್ಫಾ ಉಗ್ರರು ಸ್ವಾತಂತ್ರ್ಯ ದಿನಾಚರಣೆ ವಿರೋಧಿಸಿ ಗುವಾಹಟಿ ಸೇರಿದಂತೆ ಅಸ್ಸಾಂ ಹಲವೆಡೆ ಸುಧಾರಿತಾ ಸ್ಫೋಟಕ ಸಾಧನಾ(ಐಇಡಿ) ಸ್ಫೋಟಿಸಲು ಸಂಚು ರೂಪಿಸಿದ್ದರು. ಈ ಸಂಚು ವಿಫಲವಾದ ಹಿನ್ನೆಲೆಯಲ್ಲಿ ಶಂಕಿತ ಉಗ್ರ ಗಿರೀಶ್ ತಲೆಮರೆಸಿಕೊಂಡಿದ್ದ. ಈತನ ಬೆನ್ನು ಬಿದ್ದಿದ್ದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಗಿರೀಶ್ ಬೆಂಗಳೂರಿನ ಹೊರವಲಯದ ಆನೇಕಲ್ ಸಮೀಪ ಜಿಗಣಿಯಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಸ್ಥಳೀಯ ಪೊಲೀಸರ ನೆರವು ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತದ ವಿರುದ್ಧ ಜಿಹಾದಿ ಯುದ್ಧಕ್ಕೆ ಮುಸ್ಲಿಂ ಯುವ ಸಮುದಾಯ ಸಜ್ಜುಗೊಳಿಸುತ್ತಿದ್ದ ಶಂಕಿತ ಉಗ್ರ ಬಂಧನ

ತಾಂತ್ರಿಕ ಕಾರಣದಿಂದ ಆಗದ ಸ್ಫೋಟ:

ಶಂಕಿತ ಉಗ್ರ ಗಿರೀಶ್, ಸ್ನೇಹಿತ ಅಭಿಷೇಕ್ ಗುಹಾ ಹಾಗೂ ಇತರರು ಆ.26ರಂದು ಗುವಾಹಟಿ ಸೇರಿ ಅಸ್ಸಾಂ ರಾಜ್ಯದ ವಿವಿಧೆಡೆ ಒಂದೇ ಬಾರಿಗೆ ಐಇಡಿ ಸ್ಟೋಟಕ್ಕೆ ಸಂಚು ರೂಪಿಸಿ, 26 ಕಡೆಗಳಲ್ಲಿ ಸ್ಫೋಟಕಗಳನ್ನು ಅಡಗಿಸಿಟ್ಟಿದ್ದರು. ಗಿರೀಶ್ ಪ್ರಮುಖವಾಗಿ ಅಸ್ಸಾಂನ ಉತ್ತರ ಲಖಿಂಪುರ ಜಿಲ್ಲೆಯ 10ಕ್ಕೂ ಹೆಚ್ಚು ಕಡೆಗಳಲ್ಲಿ ಐಇಡಿ ಇರಿಸಿದ್ದ. ಆದರೆ, ತಾಂತ್ರಿಕ ಕಾರಣಗಳಿಗೆ ಅವುಗಳು ಸ್ಫೋಟಗೊಂಡಿರಲಿಲ್ಲ.

ಈ ಸಂಬಂಧ ಎನ್ಐಎ ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಆರಂಭದಲ್ಲಿ ಶಂಕಿತ ಉಗ್ರ ಅಭಿಷೇಕ್ ಗುಹಾನನ್ನು ಬಂಧಿಸಿ ವಿಚಾರಣೆ ಮಾಡಿದಾಗ, ಈ ಸಂಚಿನಲ್ಲಿ ಭಾಗಿಯಾಗಿದ್ದ ಗಿರೀಶ್ ಬೆಂಗಳೂರಿನ ಜಿಗಣಿಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಗಿರೀಶ್ನನ್ನು ಬಂಧಿಸಿದ್ದಾರೆ.

ಕುಟುಂಬ ಸಹಿತ ನಗರಕ್ಕೆ:

ಶಂಕಿತ ಉಗ್ರ ಅಭಿಷೇಕ್ ಗುಹಾ ಬಂಧನದ ಬೆನ್ನಲ್ಲೇ ಇತರೆ ಶಂಕಿತ ಉಗ್ರರು ಬಂಧನದ ಭೀತಿಯಲ್ಲಿ ಅಸ್ಸಾಂ ತೊರೆದಿದ್ದರು. ಶಂಕಿತ ಉಗ್ರ ಗಿರೀಶ್ ಸೆ.11ರಂದು ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದ. ಬಳಿಕ ಅಭಿಷೇಕ್ ಗುಹಾನ ಪತ್ನಿಯ ನೆರವು ಪಡೆದು ಜಿಗಣಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ.

ವಿದೇಶಕ್ಕೆ ಪ್ರಯಾಣಿಸುತ್ತಿದ್ದ ಶಂಕಿತ ಉಗ್ರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅರೆಸ್ಟ್

ನಕಲಿ ದಾಖಲೆ ಸಲ್ಲಿಸಿ ಸೆಕ್ಯೂರಿಟಿ ಗಾರ್ಡ್‌

ಕೋರಮಂಗಲದ ಎಫ್360 ಎಂಬ ಸೆಕ್ಯೂರಿಟಿ ಏಜೆನ್ಸಿಗೆ ನಕಲಿ ದಾಖಲೆಗಳನ್ನು ಸಲ್ಲಿಸಿ, ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವ ಎಲಿಮೆಂಟಲ್ ಫರ್ನಿಚರ್‌ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸಕ್ಕೆ ಸೇರಿದ್ದ. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಎನ್ಐಎ ಅಧಿಕಾರಿಗಳು ಹಾಗೂ ಅಸ್ಸಾಂ ಪೊಲೀಸರು, ಸೆ.24ರಂದು ಬೆಂಗಳೂರಿಗೆ ಬಂದು ಸ್ಥಳೀಯ ಪೊಲೀಸರ ನೆರವು ಪಡೆದು ಆತ ಕೆಲಸ ಮಾಡುತ್ತಿದ್ದ ಕಾರ್ಖಾನೆ ಬಳಿಯೇ ಗಿರೀಶ್‌ನನ್ನು ಬಂಧಿಸಿದ್ದಾರೆ.

ಬೆಂಗಳೂರಿಗೆ ಏಕೆ ಬಂದ?

ಶಂಕಿತ ಉಗ್ರ ಗಿರೀಶ್ ಪತ್ನಿ ಮತ್ತು ಮತ್ತೊಬ್ಬ ಶಂಕಿತ ಉಗ್ರ ಅಭಿಷೇಕ್ ಪತ್ನಿ ಬಾಲ್ಯ ಸ್ನೇಹಿತರು. ಹೀಗಾಗಿ ಗಿರೀಶ್ ಮತ್ತು ಅಭಿಷೇಕ್ ಸಹ ಸ್ನೇಹಿತರಾಗಿದ್ದರು. ಅಭಿಷೇಕ್ ಪತ್ನಿ ಜಿಗಣಿಯಲ್ಲಿ ನೆಲೆಸಿದ್ದು, ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಅಭಿಷೇಕ್, ಗಿರೀಶ್‌ಗೆ ₹5 ಲಕ್ಷ ನೀಡಿ ಅಸ್ಸಾಂನಲ್ಲಿ 10 ಕಡೆ ಐಇಡಿ ಸ್ಫೋಟಕ ಇರಿಸುವಂತೆ ಸೂಚಿಸಿದ್ದ. ಅದರಂತೆ ಗಿರೀಶ್ ಐಇಡಿ ಇರಿಸಿದ್ದ. ಆದರೆ, ಸ್ಫೋಟದ ಸಂಚು ವಿಫಲವಾಯಿತು. ಬಳಿಕ ಎನ್ಐಎ ಅಭಿಷೇಕ್‌ನನ್ನು ಬಂಧಿಸಿದ ವಿಚಾರ ತಿಳಿದು ಬೆದರಿದ ಗಿರೀಶ್, ಅಭಿಷೇಕ್ ಪತ್ನಿಯ ಸಹಾಯ ಪಡೆದು ಕುಟುಂಬ ಸಮೇತ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ