
ಬೆಂಗಳೂರು (ನ.22): ಪತ್ನಿಯ ಶೀಲ ಶಂಕಿಸಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನ ಕದಿರೇನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶ್ರೀನಿವಾಸ್ ಬಂಧಿತ ಆರೋಪಿ. ಬೆಂಕಿಯಿಂದ ತೀವ್ರ ಗಾಯಗೊಂಡಿರುವ ಪತ್ನಿ ಪುಷ್ಪಮ್ಮ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ 16 ರಂದು ನಡೆದಿದ್ದ ಘಟನೆ . 18 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ. ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಶ್ರೀನಿವಾಸ ಮೊದಲು ಪತ್ನಿಯೊಂದಿಗೆ ಚೆನ್ನಾಗಿಯೇ ಇದ್ದರು. ಬಳಿಕ ಪತ್ನಿಯ ಶೀಲ ಶಂಕಿಸಲು ಶುರು ಮಾಡಿದ್ದ ಪತಿ. ಇದೇ ವಿಚಾರವಾಗಿ ಪತ್ನಿ ಪುಷ್ಪಮ್ಮ ಜೊತೆಗೆ ಆಗಾಗ ಗಲಾಟೆ ಮಾಡುತ್ತಿದ್ದ.
ಲಿವಿಂಗ್ ಟುಗೆದರ್: ಶೀಲ ಶಂಕಿಸಿದ ಪ್ರಿಯತಮನ ಎದೆಗೆ ಚಾಕು ಇರಿದು ಕೊಂದ ಪ್ರಿಯತಮೆ..!
ಈ ವಿಚಾರವಾಗಿ ಗಲಾಟೆಯಾಗುತ್ತಿರುವುದು ಅಕ್ಕಪಕ್ಕದವರಿಗೆ ಗೊತ್ತಾಗಿ ಬುದ್ಧಿವಾದ ಹೇಳಿದ್ದರು. ಹಿರಿಯರು ಅನೇಕ ಬಾರಿ ಪಂಚಾಯಿತಿ ಮಾಡಿದ್ದರು. ಎಲ್ಲ ಸರಿಹೋಗಿದ್ದ ಶ್ರೀನಿವಾಸ ಮತ್ತೆ ಪತ್ನಿ ಮೇಲೆ ಅನುಮಾನಗೊಂಡು ಜಗಳ ತೆಗೆಯಲು ಶುರು ಮಾಡಿದ್ದ.
ಬೆಂಗಳೂರಲ್ಲಿ ಗಂಡ- ಮಂಡ್ಯದಲ್ಲಿ ಹೆಂಡ್ತಿ: ಶೀಲ ಶಂಕೆಯಿಂದ ಕೊಂದೇಬಿಟ್ಟ ಪತಿರಾಯ
ಮೊನ್ನೆ ನವೆಂಬರ್ 16ರಂದು ಇದೇ ವಿಚಾರಕ್ಕೆ ಪರಸ್ಪರ ಕಿತ್ತಾಡಿಕೊಂಡಿದ್ದರು. ಈ ವೇಳೆ ಆರೋಪಿ ಶ್ರೀನಿವಾಸ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಬಳಿಕ ಗಾಬರಿಗೊಂಡು ಪತ್ನಿಯ ಮೇಲೆ ನೀರು ಸುರಿದಿರುವ ಆರೋಪಿ ಶ್ರೀನಿವಾಸ. ಸದ್ಯ ಪುಷ್ಪಮ್ಮಗೆ ಸುಟ್ಟ ಗಾಯಗಳಾಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇತ್ತ ಅನುಮಾನ ಪಿಶಾಚಿ ಪತಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ