
ಕೋಲಾರ (ಸೆ.22): ಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತನಿಖೆ ನಡೆಸುವಂತೆ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಹುಲ್ಕೂರು ಗ್ರಾಮದಲ್ಲಿ ನಡೆದಿದೆ.
ಚಕ್ರೇಶ್ವರ್ ಮೃತ ವ್ಯಕ್ತಿ. ಬೇರೆಯವರ ಜಮೀನಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಚಕ್ರೇಶ್ವರ್. ಕೆಜಿಎಫ್ ತಾಲೂಕಿನ ಕೋಟಿಲಿಂಗೇಶ್ವರ ದೇವಸ್ಥಾನದ ಬಳಿ ಪತಿಗೆ ಹಾವು ಕಚ್ಚಿದೆ ಬಾಯಲ್ಲಿ ನೊರೆ ಬರುತ್ತಿದೆ ಎಂದು ಪತ್ನಿ ಅನಿತಾಗೆ ತಿಳಿಸಿದ್ದ ಸ್ಥಳೀಯರು. ಕೆಜೆಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವ ಪತಿ ಚಕ್ರೇಶ್ವರ್.
ಗಣಪತಿ ಪೂಜೆ ಮಾಡಿದ ವಿದ್ಯಾರ್ಥಿನಿ ಕೈ ಮುರಿದ ಮುಖ್ಯ ಶಿಕ್ಷಕಿಗೆ ದೇವರೇ ಶಿಕ್ಷೆ ಕೊಟ್ಟ!
ಆದರೆ ಪತಿ ಹಾವು ಕಚ್ಚಿ ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಳೆ. ಪತಿಯ ಸಾವಿನ ಸತ್ಯಾಸತ್ಯತೆ ತಿಳಿಯಲು ಪೊಲೀಸ್ ಠಾಣೆಗೆ ದೂರು. ಕೆಜಿಎಫ್ ನ ಬೆಮೆಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರು ಪತ್ನಿ ಅನಿತಾ. ಪತಿ ಹಾವು ಕಚ್ಚಿ ಮೃತಪಟ್ಟಿದ್ದಾನೋ, ವೈಷ್ಯಮ್ಯಕ್ಕೆ ಹತ್ಯೆ ಆಗಿದೆಯೋ ಎಲ್ಲ ಅನುಮಾನಗಳಿಗೆ ಪೊಲೀಸ್ ತನಿಖೆಯ ಬಳಿಕಷ್ಟೇ ಉತ್ತರ ಸಿಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ