
ಮಡಿಕೇರಿ (ಅ. 25) ಟಿ ಟ್ವೆಂಟಿ ವಿಶ್ವ ಕಪ್ (T20 WorldCup) ನಲ್ಲಿ ಭಾರತ (India) ಪಾಕಿಸ್ತಾನದ (Pakistan)ವಿರುದ್ಧ ಸೋಲು ಕಂಡಿದೆ. ಸಹಜವಾಗಿಯೇ ಕ್ರಿಕೆಟ್(Cricket) ಅಭಿಮಾನಿಗಳಿಗೆ ಈ ಸೋಲು ದೊಡ್ಡ ಆಘಾತವನ್ನೇ ನೀಡಿದೆ.
ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲುತ್ತಿರುವುದನ್ನು ಕಂಡ ಅಭಿಮಾನಿಗೆ ಹೃದಯಾಘಾತವಾಗಿದ್ದು (Heart Attack) ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಎಂಬುವರಿಗೆ ಹೃದಯಾಘಾತವಾಗಿದೆ. ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
Spirit of Cricket| ಗೆಲುವಿನ ಬಳಿಕ ಧೋನಿ ಎದುರು ಕೈಕಟ್ಟಿ ನಿಂತ ಪಾಕ್ ಆಟಗಾರರು!
ತಕ್ಷಣ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟೊತ್ತಿಗಾಗಲೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಕ್ರಿಕೆಟ್ ಪ್ರೇಮಿಯಾಗಿದ್ದ ಉದಯ್ ಸ್ಥಳೀಯ ಆಟಗಾರರೊಂದಿಗೆ ಗುರುತಿಸಿಕೊಂಡಿದ್ದರು. ಭಾರತ ತಂಡ ಸೋಲು ಕಂಡಿದ್ದು ಇವರಿಗೆ ದೊಡ್ಡ ಆಘಾತ ತಂದಿತ್ತು. ಕ್ರಿಕೆಟ್ ಆಟಗಾರರಾಗಿದ್ದ ಉದಯ್ ಭಾರತ ತಂಡದ ಮೇಲೆ ವಿಶೇಷ ಅಭಿಮಾನ ಇಟ್ಟುಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ