
ವಿಜಯಪುರ(ಮಾ.07): ಕರ್ತವ್ಯ ನಿರತ ಯೋಧನೋರ್ವ ನೇಣಿಗೆ ಶರಣಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು(ಭಾನುವಾರ) ನಡೆದಿದೆ. ಪರಸಪ್ಪ ಚಿಲಕನಹಳ್ಳಿ (25) ನೇಣಿಗೆ ಶರಣಾದ ಯೋಧರಾಗಿದ್ದಾರೆ.
ಪರಸಪ್ಪ ಚಿಲಕನಹಳ್ಳಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದವರಾಗಿದ್ದಾರೆ. ದೆಹಲಿಯ ನಿವಾಸದಲ್ಲಿ ಪರಸಪ್ಪ ಚಿಲಕನಹಳ್ಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ರೈಲಿಗೆ ತಲೆಕೊಟ್ಟು ಬಿ-ಟೆಕ್ ಪದವೀಧರ ಆತ್ಮಹತ್ಯೆ
ಪರಸಪ್ಪ ಚಿಲಕನಹಳ್ಳಿ ಮದ್ರಾಸ್ ರೆಜಿಮೆಂಟ್ 27 ನೇ ಬಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪರಸಪ್ಪ ಚಿಲಕನಹಳ್ಳಿ ಅವರು ತಮ್ಮ ಪತ್ನಿಯೊಂದಿಗೆ ದೆಹಲಿಯಲ್ಲಿ ವಾಸವಾಗಿದ್ದರು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ