DSP, PSI ಸೇರಿ ಬರೋಬ್ಬರಿ 50 ಜನರ ಮದುವೆಯಾದ ಲೇಡಿ..! ಫಸ್ಟ್‌ ನೈಟ್ ಮುಗಿಸಿ ಮಹಾಮೋಸ..!

Published : Jul 09, 2024, 01:15 PM ISTUpdated : Jul 10, 2024, 08:58 AM IST
DSP, PSI ಸೇರಿ ಬರೋಬ್ಬರಿ 50 ಜನರ ಮದುವೆಯಾದ ಲೇಡಿ..! ಫಸ್ಟ್‌ ನೈಟ್ ಮುಗಿಸಿ ಮಹಾಮೋಸ..!

ಸಾರಾಂಶ

ಮದುವೆಯಾಗಿ ಆ ಬಳಿಕ ಹಣ ಗಳಿಸಲು 50ಕ್ಕೂ ಅಧಿಕ ಮಂದಿಯನ್ನು ವಂಚಿಸಿದ ಕಿಲಾಡಿ ಲೇಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಈಕೆಯನ್ನು ವಿಚಾರಣೆಗೊಳಪಡಿಸಿದ ಪೊಲೀಸರೇ ಒಂದು ಕ್ಷಣ ತಬ್ಬಿಬ್ಬಾಗಿದ್ದಾರೆ. 

ಚೆನ್ನೈ: ಭಾರತದಲ್ಲಿ ಮದುವೆಗೆ ತನ್ನದೇ ಆದ ಮಹತ್ವದ ಸ್ಥಾನವಿದೆ. ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ನಡೆಯುವ ಮಧುರ ಕ್ಷಣಗಳಲ್ಲಿ ಒಂದು. ಹೀಗಿರುವಾಗ, ಇಲ್ಲಿನ ಮಹಿಳೆಯೊಬ್ಬಳು ಮದುವೆಯನ್ನೇ ಬಂಡವಾಳ ಮಾಡಿಕೊಂಡು, ಅವಿವಾಹಿತರನ್ನೇ ಟಾರ್ಗೆಟ್ ಮಾಡಿದ ಮಹಿಳೆಯೊಬ್ಬಳು 50 ಜನರನ್ನು ವಂಚಿಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ.

ತಮಿಳುನಾಡಿನ ಮಹಿಳೆಯೊಬ್ಬರು ದುಡ್ಡಿಗೋಸ್ಕರ ಬಟ್ಟೆ ಬದಲಿಸಿದಂತೆ ಗಂಡಂದಿರನ್ನು ಬದಲಿಸಿದ್ದಾರೆ. ಹೌದು, ಸಂಧ್ಯಾ ಎನ್ನುವ 30 ವರ್ಷದ ಮಹಿಳೆಯೊಬ್ಬಳು, ಅವಿವಾಹಿತರನ್ನು ಮದುವೆಯಾಗೋದು, ಆ ಬಳಿಕ ಹಣ ದುಡ್ಡು ದೋಚಿ ವಂಚಿಸುತ್ತಿದ್ದ ಕಿಲಾಡಿ ಲೇಡಿ ಇದೀಗ ತಮಿಳುನಾಡು ಪೊಲೀಸರ ಅತಿಥಿಯಾಗಿದ್ದಾಳೆ. 

ಪತ್ನಿ ಮೇಲೆ ಅತ್ಯಾಚಾರ, ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದ ಗಂಡನಿಗೆ 7 ವರ್ಷ ಜೈಲು ಶಿಕ್ಷೆ

ಅಷ್ಟಕ್ಕೂ ಏನಿದು ಘಟನೆ?

ತಮಿಳುನಾಡು ಪೊಲೀಸರ ವರದಿಯ ಪ್ರಕಾರ 35 ವರ್ಷದ ತಿರುವುರ್ ಎನ್ನುವ ವ್ಯಕ್ತಿಯೊಬ್ಬರು, ಮದುವೆಗಾಗಿ ವದುವಿನ ಹುಡುಕಾಟದಲ್ಲಿದ್ದರು. ಇದಾದ ಬಳಿಕ 'ದಿ ತಮಿಳ್ ವೇ' ಎನ್ನುವ ವೆಬ್‌ಸೈಟ್‌ನಲ್ಲಿ ಸಂಧ್ಯಾ ಎನ್ನುವ ಮಹಿಳೆಯ ಪ್ರೊಫೈಲ್ ಕಣ್ಣಿಗೆ ಬಿದ್ದಿದೆ. ಇಬ್ಬರು ಮೆಚ್ಚಿಕೊಂಡ ಬಳಿಕ ತಿರುವುರ್, ತಮ್ಮ ಮನೆಯವರನ್ನು ಒಪ್ಪಿಸಿ ಮದುವೆಯಾದರು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿದ್ದಾಗ, ಮೊದಲ ರಾತ್ರಿಯೂ ಮುಗಿದ ಬಳಿಕ ತಿರುವುರ್ ತಮ್ಮ ಪತ್ನಿ ಸಂಧ್ಯಾ ಅವರ ವರ್ತನೆಯಲ್ಲಾದ ಬದಲಾವಣೆಯನ್ನು ಗಮನಿಸಿದರು. ಇದರ ಬೆನ್ನಲ್ಲೇ ತಿರುವುರ್ ಕುಟುಂಬಸ್ಥರು ಆಕೆಯ ಆಧಾರ್ ಕಾರ್ಡ್ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಆಕೆಯ ಗಂಡನ ಹೆಸರು ಬೇರೆಯದ್ದೇ ಆಗಿತ್ತು. ಇದಾದ ಬಳಿಕ ಪೊಲೀಸರಿಗೆ ದೂರು ಕೊಡಲಾಯಿತು. ಆಗ ಕೂಲಂಕುಶವಾಗಿ ಆ ಕಿಲಾಡಿ ಲೇಡಿಯನ್ನು ವಿಚಾರಣೆ ನಡೆಸಿದಾಗ ಸುಮಾರು 50ಕ್ಕೂ ಹೆಚ್ಚು ಜನರನ್ನು ಮದುವೆಯಾಗಿ ವಂಚಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮಾಡದೇ ಇರುವ ಕೊಲೆಗೆ ಜೈಲಿನಲ್ಲಿ ಇದ್ದಾರೆ, ನೋವು ಆಗಲ್ವಾ ಅಂದ್ರು ನಿರ್ಮಾಪಕ ಕೆ ಮಂಜು!

ಇನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಈ ಕಿಲಾಡಿ ಲೇಡಿ DSP, ಓರ್ವ ಇನ್‌ಸ್ಪೆಕ್ಟರ್ ಹಾಗೂ ಮಧುರೈನ ಓರ್ವ ಪೊಲೀಸ್ ಅಧಿಕಾರಿಯೂ ಸೇರಿದಂತೆ 50 ಮಂದಿಯನ್ನು ಈಕೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಮದುವೆಯಾಗುವುದು, ಪರ್ಸ್ಟ್ ನೈಟ್ ಮುಗಿಸುವುದು, ಮರುದಿನ ಪತಿಯ ಜತೆ ಜಗಳ ಮಾಡಿಕೊಂಡು ಹಣ ಹಾಗೂ ಆಭರಣ ಪಡೆದುಕೊಂಡು ಪರಾರಿಯಾಗುವುದೇ ಈಕೆಯ ಖಯಾಲಿಯಾಗಿದೆ. ಬೇರೆ ಬೇರೆ ಹೆಸರಿಟ್ಟುಕೊಂಡು ಮದುವೆಯಾಗುವುದು, ಮದುವೆಯಾದ ಬಳಿಕ ಪತಿ ಪ್ರಶ್ನಿಸಿದರೆ, ಫೋಟೋಗಳನ್ನು ವೈರಲ್ ಮಾಡುತ್ತೇನೆ ಎಂದು ಹೆದರಿಸಿದ್ದರಿಂದಲೇ ಬಹುತೇಕ ಮಂದಿ ಯಾವುದೇ ದೂರು ದಾಖಲಿಸಿಲ್ಲ ಎಂದು ಪೂಲೀಸ್ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!