ಅಶ್ಲೀಲ ಫೋಟೋ ತೋರಿಸಿ ಮಹಿಳಾ ಟೆಕ್ಕಿಗೆ ದುಷ್ಕರ್ಮಿಗಳ ಬೆದರಿಕೆ, ಹಣಕ್ಕೆ ಬೇಡಿಕೆ

Published : Apr 15, 2025, 05:29 AM ISTUpdated : Apr 15, 2025, 06:45 AM IST
ಅಶ್ಲೀಲ ಫೋಟೋ ತೋರಿಸಿ ಮಹಿಳಾ ಟೆಕ್ಕಿಗೆ ದುಷ್ಕರ್ಮಿಗಳ ಬೆದರಿಕೆ, ಹಣಕ್ಕೆ ಬೇಡಿಕೆ

ಸಾರಾಂಶ

ಸೈಬರ್‌ ದುಷ್ಕರ್ಮಿಗಳು ಮಹಿಳಾ ಸಾಫ್ಟ್‌ವೇರ್‌ ಇಂಜಿನಿಯರೊಬ್ಬರ ಇ-ಮೇಲ್‌ ಹ್ಯಾಕ್‌ ಮಾಡಿ ವೈಯಕ್ತಿಕ ಫೋಟೋ ಮಾರ್ಫ್‌ ಮಾಡಿ 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ ಆರೋಪದಡಿ ವೈಟ್‌ಫೀಲ್ಡ್‌ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಬೆಂಗಳೂರು (ಏ.15) : ಸೈಬರ್‌ ದುಷ್ಕರ್ಮಿಗಳು ಮಹಿಳಾ ಸಾಫ್ಟ್‌ವೇರ್‌ ಇಂಜಿನಿಯರೊಬ್ಬರ ಇ-ಮೇಲ್‌ ಹ್ಯಾಕ್‌ ಮಾಡಿ ವೈಯಕ್ತಿಕ ಫೋಟೋ ಮಾರ್ಫ್‌ ಮಾಡಿ 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ ಆರೋಪದಡಿ ವೈಟ್‌ಫೀಲ್ಡ್‌ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈಟ್‌ಫೀಲ್ಡ್‌ನ ಪಿ.ಜಿ. ನಿವಾಸಿಯಾಗಿರುವ 29 ವರ್ಷದ ಮಹಿಳಾ ಟೆಕಿಗೆ ದುಷ್ಕರ್ಮಿಗಳು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಯುವತಿಗೆ ಕಿರುಕುಳ ನೀಡಿದ ಕಾಮುಕನಿಗೆ ಎಸ್ಕೇಪ್‌ ಆಗಲು ಸಹಕರಿಸಿದ್ದ ಪ್ರೇಯಸಿ ವಿಚಾರಣೆ

ಏನಿದು ಪ್ರಕರಣ?:

ಇತ್ತೀಚೆಗೆ ದೂರುದಾರೆಯ ಇ-ಮೇಲ್‌ ಹ್ಯಾಕ್‌ ಮಾಡಿರುವ ದುಷ್ಕರ್ಮಿಗಳು, ಗೂಗಲ್‌ ಲಿಂಕ್‌ ಬಳಸಿಕೊಂಡು ದೂರುದಾರೆಯ ವೈಯಕ್ತಿಕ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್‌ ಮಾಡಿ ವಿಡಿಯೋ ಸೃಷ್ಟಿಸಿದ್ದಾರೆ. ಬಳಿಕ ಆ ವಿಡಿಯೋ ಹಾಗೂ ಫೋಟೊಗಳನ್ನು ದೂರುದಾರೆಯ ಅಕ್ಕನ ಗಂಡನಿಗೆ ಕಳುಹಿಸಿದ್ದಾರೆ. 2.50 ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದಾರೆ. ಒಂದು ವೇಳೆ ಹಣ ಕೊಡದಿದ್ದಲ್ಲಿ ಈ ವಿಡಿಯೋ ಹಾಗೂ ಫೋಟೋಗಳನ್ನು ಪೋರ್ನ್‌ ವೆಬ್‌ಸೈಟ್‌ಗೆ ಅಪ್ಲೌಡ್‌ ಮಾಡುವುದಾಗಿ ಸಂದೇಶ ಕಳುಹಿಸಿ ದೂರುದಾರೆಯನ್ನು ಬ್ಲ್ಯಾಕ್‌ ಮೇಲ್‌ ಮಾಡಿದ್ದಾರೆ.

ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು