
ತುರುವೇಕೆರೆ(ಜೂ.06): ದೇವಾಲಯದ ಬಾಗಿಲು ಮುರಿದು ದೇವಿಗೆ ಹಾಕಲಾಗುತ್ತಿದ್ದ ಸುಮಾರು 40 ಗ್ರಾಂ ನಷ್ಟು ಚಿನ್ನದ ಆಭರಣ, ಒಂದು ಕೆಜಿ ಬೆಳ್ಳಿ, ಹುಂಡಿಯಲ್ಲಿನ 50, 000 ರು. ಕಳ್ಳತನ ಮಾಡಿದ ಘಟನೆ ತಾಲೂಕಿನ ಮುದ್ದನಹಳ್ಳಿ ಹೊಸೂರಿನ ದೊಡ್ಡಮ್ಮದೇವಿ ದೇವಾಲಯದಲ್ಲಿ ನಡೆದಿದೆ.
ದೇವಾಲಯದೊಳಗಿದ್ದ ಬೀರು ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಕಳ್ಳರು ಒಂದೇ ದಿನ ಇನ್ನೂ ಮೂರ್ನಾಲ್ಕು ದೇವಾಲಯ ಕಳ್ಳತನ ಮಾಡಿದ್ದಾರೆಂದು ತಿಳಿದುಬಂದಿದೆ. ದೇವಾಲಯದ ಅಧ್ಯಕ್ಷ ನಿರಂಜನ್ ತುರುವೇಕೆರೆ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ ಆರೋಪ: ಪುರಸಭೆ ಅಧ್ಯಕ್ಷೆ ಪತಿಗೆ ಮಹಿಳೆಯರಿಂದ ಥಳಿತ..!
ಗ್ರಾಮದೊಳಗೇ ಇರುವ ದೇವಾಲಯದೊಳಗೆ ಕಳ್ಳರು ಕಳ್ಳತನ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಗ್ರಾಮಗಳಲ್ಲಿ ಕುರಿ, ಮೇಕೆ, ಕೊಬರಿ, ಅಡಿಕೆ ಕಳವು ಮಾಡುತ್ತಿರುವುದು ಬೆಳಕಿಗೆ ಬರುತ್ತಿತ್ತು. ಕೂಡಲೇ ಪೋಲಿಸರು ಎಚ್ಚೆತ್ತುಕೊಂಡು ಕಳ್ಳರನ್ನು ಪತ್ತೆ ಹಚ್ಚಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ