
ದೇವದುರ್ಗ(ಸೆ.28): ತಾಲೂಕಿನ ಮುಂಡರಗಿ ಶಿವರಾಯ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು 3.70 ಲಕ್ಷ ಮೌಲ್ಯದ ದೇವರ ವಿಗ್ರಹ ಸೇರಿ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ.
ಶನಿವಾರ ರಾತ್ರಿ ದೇವಸ್ಥಾನಕ್ಕೆ ಪ್ರವೇಶಿಸಿದ ಕಳ್ಳರು ಗುಡಿಯಲ್ಲಿದ್ದ 6 ಸಾವಿರ ಬೆಳೆಬಾಳುವ 12 ತೊಲೆ ಬೆಳ್ಳಿಯ ಶಿವರಾಯ ತಾತನ ಮೂರ್ತಿ, 3.5000 ಮೌಲ್ಯದ 9 ಕೆಜಿ ಬೆಳ್ಳಿಯ ಗೋಪುರ ಆಕಾರದ ಚಟ್ಟ, ಏಳು ಸಾವಿರ ಬೆಲೆಯ 12 ತೊಲೆಯ ಚಪ್ಪಲಿ ಕೊಡಲಿ, 5 ಸಾವಿರ ಮೌಲ್ಯದ 10 ತೊಲೆ ಬೆಳ್ಳಿಯ ಎರಡು ಲಿಂಗದ ಕಾಯಿ, 2500 ಬೆಲೆಯ ಐದು ತೊಲೆಯ ಶಿವನ ಬೆಳ್ಳಿ ಮೂರ್ತಿ ಸೇರಿ ಒಟ್ಟು 3.70 ಲಕ್ಷ ಕಳ್ಳರು ಕದ್ದು ಪರಾರಿಯಾಗಿದ್ದಾರೆ.
ಮಂಡ್ಯ : 9 ತಿಂಗಳಲ್ಲಿ 23 ದೇಗುಲದಲ್ಲಿ ಕಳ್ಳತನ
ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ಬಲೆಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ