ದೇವಸ್ಥಾನದ ವಿಚಾರಕ್ಕೆ ಕೊಲೆ: ಬೆಳಗಾವಿ ಉದ್ವಿಗ್ನ, 25 ವಾಹನಗಳಿಗೆ ಬೆಂಕಿ

Published : Jun 19, 2022, 05:57 AM IST
ದೇವಸ್ಥಾನದ ವಿಚಾರಕ್ಕೆ ಕೊಲೆ: ಬೆಳಗಾವಿ ಉದ್ವಿಗ್ನ, 25 ವಾಹನಗಳಿಗೆ ಬೆಂಕಿ

ಸಾರಾಂಶ

*  ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ನಡೆದ ಘಟನೆ *  15 ಮಂದಿ ಬಂಧನ *  ಪೊಲೀಸರ ಭಾರೀ ಭದ್ರತೆ  

ಬೆಳಗಾವಿ(ಜೂ.19): ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. 

ಈ ವೇಳೆ ನಡೆದ ಹಿಂಸಾಚಾರದಲ್ಲಿ 25ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಲಾಗಿದೆ. ಸತೀಶ್‌ ಪಾಟೀಲ ಹತ್ಯೆಯಾದ ವ್ಯಕ್ತಿ. 

ಬೆಳಗಾವಿಗೂ ಕಾಲಿಟ್ಟ 'ಅಗ್ನಿಪಥ್' ಜ್ವಾಲೆ: ಜೂ.20ರಂದು ಗಡಿ ಜಿಲ್ಲೆ ಬಂದ್ ಆಗುತ್ತಾ?

ದೇವಸ್ಥಾನಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಲ್ಲಿ ಇವರನ್ನು ಹತ್ಯೆ ಮಾಡಲಾಗಿದೆ. ನಂತರ ಘರ್ಷಣೆ ಭುಗಿಲೆದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು 4 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು