ರಾಯಚೂರಲ್ಲಿ ಭೀಕರ ಅಪಘಾತ: ಶಿಕ್ಷಕರ ದಿನಾಚರಣೆಯಂದೇ ಕಾಲು ಕಳೆದುಕೊಂಡ ನಾಲ್ವರು ಮಕ್ಕಳು!

Published : Sep 05, 2024, 10:09 AM ISTUpdated : Sep 05, 2024, 11:01 AM IST
ರಾಯಚೂರಲ್ಲಿ ಭೀಕರ ಅಪಘಾತ: ಶಿಕ್ಷಕರ ದಿನಾಚರಣೆಯಂದೇ ಕಾಲು ಕಳೆದುಕೊಂಡ ನಾಲ್ವರು ಮಕ್ಕಳು!

ಸಾರಾಂಶ

ಶಾಲಾ ವಾಹನ ಮತ್ತು ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಮಕ್ಕಳ ಕಾಲು ಕತ್ತರಿಸಿ ದುರ್ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

ರಾಯಚೂರು (ಸೆ.6): ಶಾಲಾ ವಾಹನ ಮತ್ತು ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಮಕ್ಕಳ ಕಾಲು ಕತ್ತರಿಸಿ ದುರ್ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

ಒಟ್ಟು 32 ಮಕ್ಕಳು ಶಾಲಾ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಆ ಪೈಕಿ 18 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 14 ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 14 ಮಕ್ಕಳ ಪೈಕಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.

ಕಪ್‌ಗಲ್‌ ನಿಂದ ಮಾನ್ವಿ ಕಡೆ ಹೊರಟಿದ್ದ ಖಾಸಗಿ ಶಾಲಾ ವಾಹನದಲ್ಲಿ 30ಕ್ಕೂ ಅಧಿಕ ಮಕ್ಕಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ಸಿಂಧನೂರು ಕಡೆಯಿಂದ ರಾಯಚೂರಿಗೆ ಹೊರಟಿದ್ದ ಸಾರಿಗೆ ಬಸ್. ಎರಡೂ ಬಸ್‌ಗಳು ಮುಖಾಮುಖಿ ಭೀಕರವಾಗಿ ಡಿಕ್ಕಿಯಾದ ಪರಿಣಾಮ ನಾಲ್ವರ ಮಕ್ಕಳ ಕಾಲು ಕಟ್ ಆಗಿದ್ದು, ಹಲವಾರು ಮಕ್ಕಳು ಗಾಯಗೊಂಡಿದ್ದಾರೆ. 

ಆಸ್ಪತ್ರೆ ಮುಂದೆ ಪೋಷಕರು ಕಣ್ಣೀರು!

ರಿಮ್ಸ್ ಆಸ್ಪತ್ರೆಗೆ ದೌಡಾಯಿಸಿದ ಪೋಷಕರು. ಮಕ್ಕಳು ಸ್ಥಿತಿ ನೋಡಿ ಕಣ್ಣೀರಾಕಿ 'ದೇವ್ರೇ ನಮಗೆ ಯಾಕಿಂತ ಶಿಕ್ಷೆ ಎಂದು ಆಸ್ಪತ್ರೆ ಮುಂಭಾಗ ಗೋಳಾಡುತ್ತಿರುವ ಪೋಷಕರು. ಕೂಲಿ ಮಾಡಿ ಖಾಸಗಿ ಶಾಲೆಯಲ್ಲಿ ಓದಿಸುತ್ತಿದ್ದ ಪೋಷಕರು. ಇದೀಗ ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ಮಕ್ಕಳ ಸ್ಥಿತಿ ಕಂಡು ಪೋಷಕರು ಅಕ್ರಂದನ. ಸದ್ಯ ಎಲ್ಲ ಮಕ್ಕಳಿಗೂ ಚಿಕಿತ್ಸೆ ಮುಂದುವರಿದಿದೆ.

ಹೋಂ ವರ್ಕ್ ಮಾಡದ್ದಕ್ಕೆ ಮಗುವಿಗೆ ಮನಸೋಇಚ್ಛೆ ಥಳಿಸಿದ ಶಿಕ್ಷಕಿ! 

ಇಂದು ಶಿಕ್ಷಕರ ದಿನಾಚಣೆ ಹಿನ್ನೆಲೆ ಖುಷಿಯಿಂದ ಹೊರಟಿದ್ದ ವಿದ್ಯಾರ್ಥಿಗಳು. ಚಾಲಕನ ಮುಂಭಾಗದಲ್ಲಿದ್ದ ವಿದ್ಯಾರ್ಥಿಗಳಿಗೆ ಗಂಭೀರ ಗಾಯ. ಅತಿಯಾದ ವೇಗ, ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು