
ನಂಜನಗೂಡು (ಜೂ.5) : ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ಮುಖ್ಯರಸ್ತೆಯ ಜೆಪಿ ಹುಂಡಿ ಗ್ರಾಮದ ಬಳಿ ನಡೆದಿದೆ.
ತಾಲೂಕಿನ ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ (51), ಅವರ ಪತ್ನಿ ರೂಪಾ (45) ರೂಪ ಅವರ ತಾಯಿ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (65) ಮೃತ ದುರ್ದೈವಿಗಳು.
ಚಿಕ್ಕಸ್ವಾಮಿ, ಪತ್ನಿ ರೂಪಾ ತಾಲೂಕಿನ ಹಂಚಿಪುರ ಗ್ರಾಮದಿಂದ ತನ್ನ ಬೈಕಿನಲ್ಲಿ ಸಂಗಮ ಕ್ಷೇತ್ರದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು, ನಂತರ ಕಣೆನೂರು ಗ್ರಾಮದಲ್ಲಿರುವ ಚಿಕ್ಕಸ್ವಾಮಿ ಅವರ ಪತ್ನಿ ರೂಪಾ ಅವರ ತಾಯಿ ಚೆನ್ನಮಲ್ಲಮ್ಮ ಅವರಿಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಲೆಂದು ಚಿಕ್ಕಸ್ವಾಮಿ, ರೂಪಾ ಮತ್ತು ಚನ್ನಮಲ್ಲಮ್ಮ ಒಂದೇ ಬೈಕಿನಲ್ಲಿ ಹುಲ್ಲಹಳ್ಳಿ ಸಂಗಮ ಮುಖ್ಯರಸ್ತೆಯಲ್ಲಿ ಬರುತ್ತಿದ್ದ ವೇಳೆ ಜೆ.ಪಿ. ಹುಂಡಿ ಗ್ರಾಮದ ಬಳಿ ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅತಿ ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಬೈಕ್ ಸವಾರ ಮತ್ತು ಇಬ್ಬರು ಮಹಿಳೆಯರ ಮೇಲೆ ಲಾರಿಯ ಚಕ್ರ ಹರಿದು, ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲಿಸಿದರು. ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು. ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ