ಆನೇಕಲ್‌ನಲ್ಲೊಂದು ಮನಕಲಕುವ ಘಟನೆ; 80 ವರ್ಷದ ವೃದ್ಧೆಯನ್ನ ರಾತ್ರೋರಾತ್ರಿ ರಸ್ತೆಗೆ ಬಿಟ್ಟುಹೋದ ಪಾಪಿಗಳು!

Published : Jan 06, 2024, 11:19 AM IST
ಆನೇಕಲ್‌ನಲ್ಲೊಂದು ಮನಕಲಕುವ ಘಟನೆ; 80 ವರ್ಷದ ವೃದ್ಧೆಯನ್ನ ರಾತ್ರೋರಾತ್ರಿ ರಸ್ತೆಗೆ ಬಿಟ್ಟುಹೋದ ಪಾಪಿಗಳು!

ಸಾರಾಂಶ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 80 ವರ್ಷದ ವೃದ್ಧೆಯನ್ನ ಆಕೆ ಮಕ್ಕಳೇ ರಾತ್ರೋ ರಾತ್ರಿ  ಕಳ್ಳರಂತೆ ಕಾರಿನಲ್ಲಿ ಬಂದು  ನಡುರಸ್ತೆಯಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ಆನೇಕಲ್‌ ತಾಲೂಕಿನ ಸರ್ಜಾಪುರ ಸಮೀಪದ ವಿ ಕಲ್ಲಹಳ್ಳಿಯಲ್ಲಿ ನಡೆದಿದೆ.

ಆನೇಕಲ್ (ಜ.6): ರಾತ್ರಿ ವೇಳೆ ಕಳ್ಳರಂತೆ ಕಾರಿನಲ್ಲಿ ಬಂದು ವಯಸ್ಸಾದ ವೃದ್ಧೆಯನ್ನ ನಡುರಸ್ತೆಯಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ಆನೇಕಲ್‌ ತಾಲೂಕಿನ ಸರ್ಜಾಪುರ ಸಮೀಪದ ವಿ ಕಲ್ಲಹಳ್ಳಿಯಲ್ಲಿ ನಡೆದಿದೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ 80 ವರ್ಷದ ವೃದ್ದೆ. ವೃದ್ಧೆಯನ್ನು ಆರೈಕೆ ಮಾಡಲಾಗದೆ ರಸ್ತೆಯ ಬದಿ ಇರುವ ದೇವಾಸ್ಥಾನದ ಬಳಿ ಬಿಟ್ಟು ಕಳ್ಳರಂತೆ ಪರಾರಿಯಾಗಿರುವ ಮಕ್ಕಳು. ಘಟನೆ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವೃದ್ಧೆಯ ಪಾಡು ಮನಕಲಕುವಂತಿದೆ ಇತ್ತ ಮಕ್ಕಳ ದುಷ್ಕೃತ್ಯ ಕಂಡು ಜನರು ಹಿಡಿಶಾಪ್ ಹಾಕಿದ್ದಾರೆ. 

ಸಂಸ್ಕಾರ ಇಲ್ಲದ ಮಕ್ಕಳಿಂದಾಗಿ ವೃದ್ಧಾಶ್ರಮ ಹೆಚ್ಚಳ : ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ

ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸೋ ಮಕ್ಕಳನ್ನು ನೋಡಿದ್ದೇವೆ. ಆದರೆ ಈ ಪಾಪಿ ಇಂಥ ಚಳಿಯಲ್ಲೂ ನಡುರಸ್ತೆಗೆ ಬಿಟ್ಟುಹೋಗಿದ್ದಾರೆಂದರೆ ಮನುಕುಲಕ್ಕೆ ಕಳಂಕ. ಹೆತ್ತ ತಾಯಿಯ ಮೇಲೆ ಕರುಣೆ ಇಲ್ಲದೆ ಬೀಸಾಡಿಹೋಗಿರುವ ಮಕ್ಕಳು ರಾತ್ರಿ ಹೊತ್ತಲ್ಲಿ ಕಾಡುಪ್ರಾಣಿ, ಬೀದಿನಾಯಿಗಳ ದಾಳಿ ಮಾಡಿದ್ದಾರೆ ಏನು ಗತಿ? ವೃದ್ಧೆಯನ್ನು ಕಂಡು ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!