ತೀರ್ಥಹಳ್ಳಿ: ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಮೃತದೇಹ ಪತ್ತೆ!

Published : Mar 25, 2023, 04:03 PM ISTUpdated : Mar 25, 2023, 04:07 PM IST
ತೀರ್ಥಹಳ್ಳಿ: ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಮೃತದೇಹ ಪತ್ತೆ!

ಸಾರಾಂಶ

ಇಲ್ಲಿನ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪೊಲೀಸ ಪೇದೆ ಶವ ಪತ್ತೆಯಾಗಿದೆ. ಪಟ್ಟಣ ದಲ್ಲಿ ಸೊಪ್ಪುಗುಡ್ಡೆಯಲ್ಲಿರುವ ಮೀನು ಮತ್ತು ಮಾಂಸ ಮಾರಾಟ ಮಾರುಕಟ್ಟೆಯಲ್ಲಿ ಪೊಲೀಸ್ ಸಿಬ್ಬಂದಿ ಪೂರ್ಣೇಶ್ ಶವ ಪತ್ತೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಂದು ಹಾಕಿದಂತೆ ರಕ್ತಸಿಕ್ತವಾಗಿ ಬಿದ್ದಿರುವ ಮೃತದೇಹ.

ತೀರ್ಥಹಳ್ಳಿ (ಮಾ.25)  ಇಲ್ಲಿನ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪೊಲೀಸ ಪೇದೆ ಶವ ಪತ್ತೆಯಾಗಿದೆ. ಪಟ್ಟಣ ದಲ್ಲಿ ಸೊಪ್ಪುಗುಡ್ಡೆಯಲ್ಲಿರುವ ಮೀನು ಮತ್ತು ಮಾಂಸ ಮಾರಾಟ ಮಾರುಕಟ್ಟೆಯಲ್ಲಿ ಪೊಲೀಸ್ ಸಿಬ್ಬಂದಿ ಪೂರ್ಣೇಶ್(Purnesh murder) ಶವ ಪತ್ತೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಂದು ಹಾಕಿದಂತೆ ರಕ್ತಸಿಕ್ತವಾಗಿ ಬಿದ್ದಿರುವ ಮೃತದೇಹ.

 ಪೊಲೀಸ ಇಲಾಖೆ(Police depertment)ಯಲ್ಲಿ ಪೊಲೀಸ್ ಪೇದೆಯಾಗಿದ್ದ ಪೂರ್ಣೇಶ,  ಆಗುಂಬೆ, ತೀರ್ಥಹಳ್ಳಿ ,ಮಾಳೂರು ಕುಂಸಿಯಲ್ಲಿ ಸೇವೆ ಸಲ್ಲಿಸಿದ್ದರು. ಕುಡಿತದ ಚಟ ಅಂಟಿಸಿಕೊಂಡಿದ್ದ ಪೂರ್ಣೇಶ್ ಈಗಾಗಲೇ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮೂರಕ್ಕೂ ಹೆಚ್ಚು ಬಾರಿ ಅಮಾನತ್ತು ಗೊಂಡಿದ್ದರು. ಇದೀಗ ಸೊಪ್ಪುಗುಡ್ಡೆ ಮೀನು ಮಾರುಕಟ್ಟೆಯಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಸದ್ಯ ಪೊಲೀಸರು ಮೃತದೇಹ ಪರಿಶೀಲಿಸಿದ್ದು ಈ ಪ್ರಕರಣದ ಬೆನ್ನುಹತ್ತಿದ್ದಾರೆ. 

ತೀರ್ಥಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

ಗೋಕಾಕ್‌: ಉದ್ಯಮಿ ರಾಜು ಝಂವರ್ ಹತ್ಯೆ ಪ್ರಕರಣ, 6 ದಿನಗಳ ಬಳಿಕ ಶವ ಪತ್ತೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!