12 ವರ್ಷ ಹುಡುಕಿದ್ರೂ ಕನ್ಯೆ ಸಿಗದ್ದಕ್ಕೆ ನೊಂದು ಯುವಕ ನೇಣಿಗೆ ಶರಣು!

Published : Feb 22, 2025, 09:52 AM ISTUpdated : Feb 22, 2025, 09:53 AM IST
12 ವರ್ಷ ಹುಡುಕಿದ್ರೂ ಕನ್ಯೆ ಸಿಗದ್ದಕ್ಕೆ ನೊಂದು ಯುವಕ ನೇಣಿಗೆ ಶರಣು!

ಸಾರಾಂಶ

ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮದುವೆಗೆ ಕನ್ಯೆ ಸಿಗದ ಕಾರಣಕ್ಕೆ 35 ವರ್ಷದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 10-12 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದರೂ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು.

ಹಾವೇರಿ (ಫೆ.22): ವಯಸ್ಸಾದರೂ ಮದುವೆಗೆ ಕನ್ಯೆ ಸಿಗದ್ದರಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ನಡೆದಿದೆ.

ಪ್ರಕಾಶ ಬಸವರಾಜ ಹೂಗಾರ (35) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಇವರು ಕಳೆದ 10- 12 ವರ್ಷಗಳಿಂದ ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಅದೇ ಚಿಂತೆಯಲ್ಲಿ ಕೊರಗುತ್ತಿದ್ದ.

 ಗುರುವಾರ ಮನೆಯ ಬೆಡ್‌ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹಗ್ಗದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಒದ್ದಾಡುತ್ತಿದ್ದ. ತಕ್ಷಣ ಮನೆಯವರು ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಈತನ ತಂದೆ ಬಸವರಾಜ ಹೂಗಾರ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಮಕ್ಕಳಿಗೆ ಸಿಗದ ಕನ್ಯೆ.. ಇದೇ ವಂಚಕರಿಗೆ ಬಂಡವಾಳ: ನಕಲಿ ಮದುವೆ ಮಾಡಿ ಹಣ ಸುಲಿಗೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜೈಲೂಟ ತಿಂದರೂ ಬಿಡದ ಹಳೇ ಚಾಳಿ: 2 ತಿಂಗಳ ಹಿಂದಷ್ಟೇ ಬಿಡುಗಡೆಯಾಗಿ ಮತ್ತೆ ಡ್ರಗ್‌ ದಂಧೆಗಿಳಿದ ಯುವತಿಯ ಬಂಧನ
Chikkaballapur: ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ