ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ ಕಾಲುವೆಗೆ ಬಿದ್ದು ಸಾವು!

Published : Feb 22, 2023, 01:27 PM IST
ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ ಕಾಲುವೆಗೆ ಬಿದ್ದು ಸಾವು!

ಸಾರಾಂಶ

ಕಾಲುವೆಯಲ್ಲಿ ಜಾರಿಬಿದ್ದು ಬಾಲಕ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಅಸಂಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ವಿಜಯಪುರ (ಫೆ.22) : ಕಾಲುವೆಯಲ್ಲಿ ಜಾರಿಬಿದ್ದು ಬಾಲಕ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಅಸಂಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಕಲ್ಲಯ್ಯ ಹಿರೇಮಠ(Kallaiah Hiremath)(13) ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ಬಾಲಕ. ನಿನ್ನೆ ಶಾಲೆಯಿಂದ ಮನೆಗೆ ಬಂದಿದ್ದ ಬಾಲಕ. ಬಳಿಕ ತಂದೆಯನ್ನ ಕಾಣಲು ಜಮೀನಿಗೆ ತೆರಳಿದ್ದ. ಈ ಹಿಂದೆಯೂ ತಂದೆಯಿಂದ ಜಮೀನಿಗೆ ಹೋಗುತ್ತಿದ್ದ ಬಾಲಕ. ನಿನ್ನೆ ಹೊರಟ ವೇಳೆ ತುಂಬಿ ಹರಿಯುತ್ತಿದ್ದ  ಮುಳವಾಡ ಏತ‌ ನೀರಾವರಿ(Mulavada lift irrigation) ಯೋಜನೆ ಮುಖ್ಯ ಕಾಲುವೆಗೆ ಬಿದ್ದಿದ್ದಾನೆ. ಈಜು ಬಾರದ ಬಾಲಕ ಕಾಲುವೆಯಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾನೆ.

ಕೌಟುಂಬಿಕ ದೌರ್ಜನ್ಯದ ಡಿವೋರ್ಸ್‌: ಪತ್ನಿ ಜೀವನಾಂಶ ಪಡೆಯಲು ಅರ್ಹಳೆಂದ ಬಾಂಬೆ ಹೈ

ಜಮೀನಿನಿಂದ ತಂದೆ ಮನೆಗೆ ಬಂದರೂ ಬಾಲಕ ಹಿಂದಿರುಗಿಲ್ಲ. ಹೀಗಾಗಿ ಅನುಮಾನಗೊಂಡ ಪೋಷಕರು ಸುತ್ತಮುತ್ತ ಹುಡುಕಾಡಿದ್ದಾರೆ. ಜಮೀನಿಗೆ ಹೋಗಿಬಂದಿದ್ದಾರೆ ಅಲ್ಲೆಲ್ಲೂ ಕಾಣಿಸದ ಮಗ. ಇಂದು ಬೆಳಗ್ಗೆ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಮಾಹಿತಿ ತಿಳಿದು ಕೊಲ್ಹಾರ ಪೊಲೀಸರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ತಾಪ್ತಿ ಘಟನೆ ನಡೆದಿದೆ.

ಕೌಟುಂಬಿಕ ಕಲಹದಿಂದ ನೊಂದು ಗೃಹಿಣಿ ಆತ್ಮಹತ್ಯೆ

ಬೆಂಗಳೂರು : ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಬೇಸರಗೊಂಡು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್‌.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಯ್ಯಪ್ಪ ನಗರದ ನಿವಾಸಿ ಸಾಯಿ ಸುಮನಾ (26) ಮೃತ ದುರ್ದೈವಿ. ಮನೆಯಲ್ಲಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಸಾಯಿಸುಮನಾ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲ ಹೊತ್ತಿನ ಬಳಿಕ ಮೃತಳ ಪತಿ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೌಟುಂಬಿಕ ಕಲಹ: ಈ ವಾಸ್ತು ಟಿಪ್ಸ್ ಫಾಲೋ ಮಾಡಿದರೆ ಸಮಸ್ಯೆಗೆ ಸಿಗುತ್ತೆ ಪರಿಹಾರ!

ಐದು ವರ್ಷಗಳ ಹಿಂದೆ ಕೋಲಾರ ಜಿಲ್ಲೆ ಗೊಂಡಾಪುರದ ವೇದಾಂತ್‌ ಕುಮಾರ್‌ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಸಾಯಿಸುಮನಾ ಪ್ರೇಮ ವಿವಾಹವಾಗಿದ್ದು, ದಂಪತಿಗೆ ಮೂರು ವರ್ಷದ ಗಂಡು ಮಗುವಿದೆ. ಮನೆ ಸಮೀಪದಲ್ಲಿ ವೇದಾಂತ್‌ ಪಾನಿಪೂರಿ ಅಂಗಡಿ ನಡೆಸುತ್ತಿದ್ದ. ಇತ್ತೀಚೆಗೆ ಕೌಟುಂಬಿಕ ವಿಚಾರವಾಗಿ ಸತಿ-ಪತಿ ಮಧ್ಯೆ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಪರಸ್ಪರ ಜಗಳವಾಡುತ್ತಿದ್ದರು. ಅಂತೆಯೇ ಸೋಮವಾರ ರಾತ್ರಿ ಕೂಡಾ ವೇದಾಂತ್‌ ಹಾಗೂ ಸಾಯಿ ಸುಮನಾ ಮಧ್ಯೆ ಜಗಳವಾಗಿದೆ. ಇದಾದ ಬಳಿಕ ಊಟ ತರಲು ಮನೆಯಿಂದ ವೇದಾಂತ್‌ ಹೊರ ಹೋಗಿದ್ದಾನೆ. ಆ ವೇಳೆ ಸಾಯಿ ಸುಮನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!