
ಬೆಂಗಳೂರು(ಮೇ.29): ಮೋಜು-ಮಸ್ತಿಗೆ ಸುಲಭವಾಗಿ ಹಣ ಹೊಂದಿಸಲು ಸೈಕಲ್ಗಳನ್ನು ಮಾತ್ರ ಕಳವು ಮಾಡುತ್ತಿದ್ದ ಚಾಲಾಕಿ ಕಳ್ಳನೊಬ್ಬ ಸುದ್ದಗುಂಟೆ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಮೈಲಸಂದ್ರ ನಿವಾಸಿ ಬಾಲರಾಜ್ ಅಲಿಯಾಸ್ ಬಾಲ (48) ಬಂಧಿತ. ಈತನಿಂದ .6 ಲಕ್ಷ ಮೌಲ್ಯದ 54 ಸೈಕಲ್ಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಸುದ್ದಗುಂಟೆ ವ್ಯಾಪ್ತಿಯ ಮನೆಯೊಂದರಲ್ಲಿ ಸೈಕಲ್ ಕಳುವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮರಾದಲ್ಲಿ ದೊರೆತ ಸುಳಿನ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈತನ ಬಂಧನದಿಂದ ಸುದ್ದಗುಂಟೆ ಠಾಣೆಯಲ್ಲಿ 9 ಹಾಗೂ ಮಡಿವಾಳ ಠಾಣೆಯಲ್ಲಿ ದಾಖಲಾಗಿದ್ದ 1 ದೂರು ಸೇರಿ ಒಟ್ಟು 10 ಸೈಕಲ್ ಕಳವು ಪ್ರಕರಣಗಳು ಪತ್ತೆಯಾಗಿವೆ.
Davanagere: ಭತ್ತ ಕಟಾವು ಮಾಡುವಾಗ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು
ವೃತ್ತಿಪರ ಕಳ್ಳನಾಗಿರುವ ಬಾಲರಾಜ್ ಈ ಹಿಂದೆ ತಿಲಕ ನಗರದಲ್ಲಿ ನೆಲೆಸಿದ್ದ ವೇಳೆ ಮನೆಗಳವು ಮಾಡಿ ಹಲವು ಬಾರಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದ ಬಳಿಕ ಮೈಲಸಂದ್ರಕ್ಕೆ ವಾಸ್ತವ್ಯ ಬದಲಿಸಿದ್ದ ಆರೋಪಿ ಮತ್ತೆ ಸೈಕಲ್ ಕಳವು ಕೃತ್ಯದಲ್ಲಿ ತೊಡಗಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.
ಯಾರೂ ದೂರು ಕೊಡಲ್ಲ ಎಂದು ಸೈಕಲ್ಗಳಿಗೆ ಕನ್ನ
ಸೈಕಲ್ ಕಳವು ಮಾಡುವುದರಿಂದ ಬಹುತೇಕರು ಪೊಲೀಸರಿಗೆ ದೂರು ನೀಡುವುದಿಲ್ಲ. ಮನೆಗಳ್ಳತನಕ್ಕಿಂತ ಸೈಕಲ್ ಕಳವು ಸುಲಭ. ಯಾವುದೇ ಕಷ್ಟವಿಲ್ಲದೆ ಸೈಕಲ್ ಕದ್ದು ಸುಲಭವಾಗಿ ವಿಲೇವಾರಿ ಮಾಡಬಹುದು ಎಂಬ ಕಾರಣಕ್ಕೆ ಸೈಕಲ್ ಕಳ್ಳತನಕ್ಕೆ ಇಳಿದಿದ್ದ. ಮನೆ ಆವರಣ, ಪಾರ್ಕಿಂಗ್ ಸ್ಥಳ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದುಬಾರಿ ದರದ ಸೈಕಲ್ಗಳನ್ನು ಕಳುವು ಮಾಡುತ್ತಿದ್ದ. ಈ ಸೈಕಲ್ಗಳನ್ನು ಕೇವಲ ಎರಡು-ಮೂರು ಸಾವಿರಕ್ಕೆ ಮಾರಾಟ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ