ಹುಬ್ಬಳ್ಳಿ: ಸ್ವೈಪಿಂಗ್ ಮಷಿನ್ ಮೂಲಕ ಗೌಪ್ಯ ಮಾಹಿತಿ ಕದ್ದು ಹಣ ಲೂಟಿ‌ ಮಾಡ್ತಿದ್ದ‌ ಖರ್ತನಾಕ್ ಕಳ್ಳ ಅರೆಸ್ಟ್‌

Published : Nov 30, 2023, 08:32 PM IST
ಹುಬ್ಬಳ್ಳಿ: ಸ್ವೈಪಿಂಗ್ ಮಷಿನ್ ಮೂಲಕ ಗೌಪ್ಯ ಮಾಹಿತಿ ಕದ್ದು ಹಣ ಲೂಟಿ‌ ಮಾಡ್ತಿದ್ದ‌ ಖರ್ತನಾಕ್ ಕಳ್ಳ ಅರೆಸ್ಟ್‌

ಸಾರಾಂಶ

ಮಂಗಳೂರು ಮೂಲದ ಮಹ್ಮದ್ ಹಮೀದ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ  ಎರಡು ಭಾರತ್ ಪೇ ಸ್ಟೈಪಿಂಗ್ ಯಂತ್ರ, ಎರಡು ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್ ವಶಕ್ಕೆ ಪಡೆಯಲಾಗಿದೆ. ಸ್ವೈಪಿಂಗ್ ಯಂತ್ರಗಳಿಂದ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಗೌಪ್ಯ ಮಾಹಿತಿ ಕದಿಯುತ್ತಿದ್ದ ಆರೋಪಿ, ನಂತರ ಹಣ ವರ್ಗಾವಣೆ ಮಾಡಿಕೊಂಡು ವಂಚಿಸ್ತಿದ್ದ. ಇನ್ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡದಿಂದ ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 

ಹುಬ್ಬಳ್ಳಿ(ನ.30):  ಸ್ವೈಪಿಂಗ್ ಯಂತ್ರಗಳ ಮೂಲಕ ಗೌಪ್ಯ ಮಾಹಿತಿ ಕದಿಯುತ್ತಿದ್ದ ಖದೀಮನನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ಮೂಲದ ಮಹ್ಮದ್ ಹಮೀದ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ  ಎರಡು ಭಾರತ್ ಪೇ ಸ್ಟೈಪಿಂಗ್ ಯಂತ್ರ, ಎರಡು ಮೊಬೈಲ್ ಫೋನ್ ಹಾಗೂ ಎಟಿಎಂ ಕಾರ್ಡ್ ವಶಕ್ಕೆ ಪಡೆಯಲಾಗಿದೆ. ಸ್ವೈಪಿಂಗ್ ಯಂತ್ರಗಳಿಂದ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಗೌಪ್ಯ ಮಾಹಿತಿ ಕದಿಯುತ್ತಿದ್ದ ಆರೋಪಿ, ನಂತರ ಹಣ ವರ್ಗಾವಣೆ ಮಾಡಿಕೊಂಡು ವಂಚಿಸ್ತಿದ್ದ. ಇನ್ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡದಿಂದ ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. 

ಬೆಂಗಳೂರು: ಟೈರ್‌ ಪಂಕ್ಚರ್‌ ಮಾಡಿ 25 ಲಕ್ಷದ ಚಿನ್ನ ಎಗರಿಸಿದ ಖದೀಮನ ಬಂಧನ

ಬಳಕೆ ಮಾಡದೆ ಇರುವ ಸ್ಟೈಪಿಂಗ್ ಯಂತ್ರಗಳನ್ನು ಸಂಗ್ರಹಿಸುತ್ತಿದ್ದ ಆರೋಪಿ, ನಂತರ ಅವುಗಳನ್ನು ಸೈಬರ್ ವಂಚಕರಿಗೆ ಪೂರೈಸುತ್ತಿದ್ದ. ಅವುಗಳನ್ನು ಬಳಸಿಕೊಂಡು ಗ್ರಾಹಕರ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಗೋಪ್ಯ ಮಾಹಿತಿ ಹ್ಯಾಕ್ ಮಾಡುತ್ತಿದ್ದ ವಂಚಕರು, ನಂತರ ನಕಲಿ ಕಾರ್ಡ್ ತಯಾರಿಸಿ ಷೋ ರೂಮ್ಗಳಲ್ಲಿ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿದ್ದು, ಇತರೆ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು