ಎಟಿಎಂ ಕಾರ್ಡ್ ಬದಲಿಸಿ ಹಣ ಕದಿಯುತ್ತಿದ್ದ ಕಳ್ಳ ಬಂಧನ

Published : Dec 13, 2022, 02:54 AM IST
ಎಟಿಎಂ ಕಾರ್ಡ್ ಬದಲಿಸಿ ಹಣ ಕದಿಯುತ್ತಿದ್ದ ಕಳ್ಳ ಬಂಧನ

ಸಾರಾಂಶ

ಅಮಾಯಕರನ್ನು ಗುರಿಯಾಗಿಸಿಕೊಂಡು ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಗ್ರಾಹಕರ ಎಟಿಎಂ ಕಾರ್ಡ್‌ಗಳನ್ನು  ಬದಲಿಸಿ ಬಳಿಕ ಎಟಿಎಂ ಕೇಂದ್ರಗಳಲ್ಲಿ ಹಣ ದೋಚಿ ಪರಾರಿ ಆಗುತ್ತಿದ್ದ ಕುಖ್ಯಾತ ಕಳ್ಳನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಬಳ್ಳಾಪುರ (ಡಿ.13), ಅಮಾಯಕರನ್ನು ಗುರಿಯಾಗಿಸಿಕೊಂಡು ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಗ್ರಾಹಕರ ಎಟಿಎಂ ಕಾರ್ಡ್‌ಗಳನ್ನು  ಬದಲಿಸಿ ಬಳಿಕ ಎಟಿಎಂ ಕೇಂದ್ರಗಳಲ್ಲಿ ಹಣ ದೋಚಿ ಪರಾರಿ ಆಗುತ್ತಿದ್ದ ಕುಖ್ಯಾತ ಕಳ್ಳನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮೈಸೂರು ಮೂಲದ ಹಾಲನಹಳ್ಳಿಯ ಚಾಮುಂಡೇಶ್ವರಿ ಬ್ಲಾಕ್‌ನ ನಿವಾಸಿ ಬಿ.ಕೆ.ಕಿರಣ್ ಕುಮಾರ್ ಬಿನ್ ಕಾಳೇಗೌಡ  (32) ಎಂದು ಗುರುತಿಸಲಾಗಿದೆ. ಬಂಧಿನಿಂದ 2.46 ಲಕ್ಷ ರು, ನಗದು ಹಾಗೂ ವಿವಿಧ ಬ್ಯಾಂಕ್‌ಗಳ 14 ಎಟಿಎಂ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

 

ಶೋಕಿಗೆ ಜೀವನಕ್ಕಾಗಿ ದೇವಸ್ಥಾನದ ಬಾಗಿಲು ಒಡೆದು ಕಳ್ಳತನ ಮಾಡ್ತಿದ್ದ ಸರ್ಕಾರಿ ಶಾಲೆ ಶಿಕ್ಷಕ!

ರಾಜ್ಯದ ವಿವಿಧಡೆ 8 ಪ್ರಕರಣ ದಾಖಲು:

  ಆರೋಪಿ ಬಿ.ಕೆ.ಕಿರಣ್ ಕುಮಾರ್ ವಿರುದ್ದ ಕುಮಟಾ, ಶಿರಾಳಕೊಪ್ಪ, ಉಡುಪಿ, ಕೊಡುಗು, ಹಡಿಯಾಳ, ಮುಂಗೋಡು ಮತ್ತಿತರ ಕಡೆಗಳಲ್ಲಿ ಒಟ್ಟು 8 ಪ್ರಕರಣಗಳು ವರದಿಯಾಗಿ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದೆ. ಅಲ್ಲದೇ ಚಿಕ್ಕಬಳ್ಳಾಪುರ ನಗರದಲ್ಲಿ 2, ದಾವಣಗೆರೆಯ ಬಸವನಗರ ಠಾಣೆ, ರಾಮನಗರ ಐಜೂರು ಠಾಣೆ, ಹೊಸದುರ್ಗ ಪೊಲೀಸ್ ಠಾಣೆ, ಯಾದಗಿರಿ ಪೊಲೀಸ್ ಠಾಣೆ, ಕೊಳ್ಳೆಗಾಲ ಪೊಲೀಸ್ ಠಾಣೆ, ಜಗಲೂರು , ಗದಗ ಹಾಗೂ ಜಮಖಂಡಿ ಠಾಣೆಗಳ ಸರಹದ್ದಿನಲ್ಲಿ ಒಟ್ಟು 11 ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರಿಗೆ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಜೊತೆಗೆ ಹಣ ಡ್ರಾ ಮಾಡುವ ವೇಳೆ ಅವರ ಪಿನ್ ನಂಬರ್ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಬಳಿಕ ಅವರ ಎಟಿಎಂ ಕಾರ್ಡ್‌ಗಳನ್ನು ಸಿನೀಮಿಯ ರೀತಿಯಲ್ಲಿ ಬದಲಾಯಿಸಿ ಗ್ರಾಹಕರ ಹಣ ದೋಚಿತ್ತಿದ್ದನೆಂದು ಎಸ್ಪಿ ನಾಗೇಶ್ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು