
ಬೆಂಗಳೂರು(ಜ.20): ನಗರದಲ್ಲಿ ಮನೆಗಳ್ಳತನ ಹಾಗೂ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ವೃತ್ತಿಪರ ಖದೀಮನೊಬ್ಬ ಸೋಲದೇವನಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಾಮಾಕ್ಷಿಪಾಳ್ಯದ ವೃಷಾಭವತಿ ನಗರದ ಗಣೇಶ್ ಅಲಿಯಾಸ್ ಚಾರ್ಲಿ ಬಂಧಿತನಾಗಿದ್ದು, ಆರೋಪಿಯಿಂದ .3.85 ಲಕ್ಷ ಮೌಲ್ಯದ 57 ಗ್ರಾಂ ಚಿನ್ನಾಭರಣ ಹಾಗೂ ವಿವಿಧ ಕಂಪನಿಯ ಮೂರು ಬೈಕ್ ಜಪ್ತಿ ಮಾಡಲಾಗಿದೆ.
ಗಣಪತಿ ನಗರದ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಯನ್ನು ಅಡ್ಡಗಟ್ಟಿಪರಿಶೀಲಿಸಿದಾಗ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ. ಅನುಮಾನದ ಮೇರೆಗೆ ಆತನನ್ನು ಠಾಣೆಗೆ ಕರೆ ತಂದು ವಿಚಾರಿಸಿದಾಗ ಸತ್ಯ ಬಯಲಾಯಿತು ಎಂದು ಪೊಲೀಸರು ಹೇಳಿದ್ದಾರೆ.
ವೈದ್ಯ ಸೀಟು ಕೊಡಿಸುವುದಾಗಿ 52 ಲಕ್ಷ ವಂಚನೆ
ತಮಿಳುನಾಡು ಮೂಲದ ಗಣೇಶ್ ವೃತ್ತಿಪರ ಖದೀಮನಾಗಿದ್ದು, ಆತನ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಕದ್ದು ಬಳಿಕ ಅದೇ ಬೈಕ್ನಲ್ಲಿ ತೆರಳಿದ ಬೀಗ ಮನೆಗಳಿಗೆ ಕನ್ನ ಹಾಕುತ್ತಿದ್ದ. ಆರೋಪಿ ಬಂಧನದಿಂದ ಸೋಲದೇವನಹಳ್ಳಿ, ತುಮಕೂರು ಹೆಬ್ಬೂರು, ವಿಜನಯಗರ ಹಾಗೂ ಯಲಹಂಕ ಉಪ ನಗರ ಠಾಣಾ ವ್ಯಾಪ್ತಿಯ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ