ಕಲಬುರಗಿ: ವೃದ್ಧೆಗೆ ಮಚ್ಚಿನಿಂದ ಗಾಯಗೊಳಿಸಿದ ಕಳ್ಳ

Kannadaprabha News   | Asianet News
Published : Sep 20, 2021, 03:02 PM IST
ಕಲಬುರಗಿ: ವೃದ್ಧೆಗೆ ಮಚ್ಚಿನಿಂದ ಗಾಯಗೊಳಿಸಿದ ಕಳ್ಳ

ಸಾರಾಂಶ

*   ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ನಡೆದ ಘಟನೆ *   ತೀವ್ರ ರಕ್ತಸ್ರಾವದಿಂದಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವೃದ್ಧೆ  *   ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು   

ಚಿಂಚೋಳಿ(ಸೆ.20):  ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವದಲ್ಲಿ ಹನುಮಾನ ದೇವಾಲಯ ಹತ್ತಿರದ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ವ್ಯಕ್ತಿಯೊಬ್ಬ ವೃದ್ಧೆಗೆ ಮಚ್ಚಿನಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ.

ಕೊಳ್ಳುರ ಗ್ರಾಮದ ಗುಂಡಮ್ಮ ಲಾಲಪ್ಪ ಬೂತಪಳ್ಳಿ(75) ಗಾಯಗೊಂಡಿರುವ ವೃದ್ಧೆ. ಕಳ್ಳ ಮನೆ ಬಾಗಿಲ ಮೇಲಿಂದ ಜಿಗಿದು ಮನೆಯೊಳಗೆ ನುಗ್ಗುತ್ತಿರುವಾಗ ಪಾತ್ರೆಗಳ ಸಪ್ಪಳ ಕೇಳಿದ ವೃದ್ಧೆ ಚೀರಿಕೊಂಡಿದ್ದಾಳೆ. ಈ ವೇಳೆ ಕಳ್ಳನ ಕೈಯಲ್ಲಿದ್ದ ಮಚ್ಚಿನಿಂದ ವೃದ್ಧೆಯ ಕುತ್ತಿಗೆ ಹೊಡೆದು ಗಾಯಗೊಳಿಸಿದ್ದಾನೆ. ಪಕ್ಕದಲ್ಲಿಯೇ ಮಲಗಿದ್ದ ಮೊಮ್ಮಕ್ಕಳು ಎಚ್ಚರಗೊಂಡು ಹಾಸಿಗೆಯಲ್ಲಿಯೇ ಇಣಕಿ ನೋಡಿ ಸುಮ್ಮನಾಗಿದ್ದರು.

ಕಳ್ಳಿಯ ಕೈಚಳಕ, ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಕೊಂಡಿದ್ದ 4 ಲಕ್ಷ ರೂ ಗೋವಿಂದ..!

ಎಲ್ಲಿ ನನಗೂ ಮಚ್ಚಿನಿಂದ ಹೊಡೆಯುತ್ತಾನೆ ಎಂದು ಭಯಗೊಂಡಿದ್ದೇವೆ ಎಂದು ಸೊಸೆ ರತ್ನಮ್ಮ ಮೊಮ್ಮಗಳು ಜಯಶ್ರೀ ತಿಳಿಸಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ವೃದ್ಧೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡು ಮನೆಯವರೆಲ್ಲರೂ ಚೀರಿಕೊಂಡಾಗ ಗ್ರಾಮಸ್ಥರು ಓಡಿ ಬಂದು ಕೂಡಲೇ ಚಿಂಚೋಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಶಾಬಾದ್‌ ಡಿವೈಎಸ್ಪಿ ಚಿಕ್ಕಮಠ, ಚಿಂಚೋಳಿ ಸಿಪಿಐ ಮಹಾಂತೇಶ ಪಾಟೀಲ, ಪಿಎಸ್‌ಐ ಎ.ಎಸ್‌. ಪಟೇಲ್‌ ಪೋಲಿಸರು ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!