ಮಹಿಳೆಯರಿಗೆ ಉಚಿತ ಪ್ರಯಾಣ: ರಶ್‌ ಆದ ಬಸ್‌ನಲ್ಲಿ ಅಜ್ಜಿಯ 30,000 ಹಣ ದೋಚಿದ ಕಳ್ಳರು

Published : Jun 13, 2023, 01:43 PM IST
ಮಹಿಳೆಯರಿಗೆ ಉಚಿತ ಪ್ರಯಾಣ: ರಶ್‌ ಆದ ಬಸ್‌ನಲ್ಲಿ ಅಜ್ಜಿಯ 30,000 ಹಣ ದೋಚಿದ ಕಳ್ಳರು

ಸಾರಾಂಶ

ಬಾದಾಮಿಗೆ ಸಂಬಂಧಿ​ಕರೊಬ್ಬರಿಗೆ 30 ಸಾವಿರ ಹಣ ಕೊಡಲು ಹೊರಟಿದ್ದ ಅಜ್ಜಿ ಚೆನ್ನಮ್ಮ ಎಂಬ ವೃದ್ಧೆಯ ಹಣ ಕಳ್ಳತನವಾಗಿದೆ. ಗದ್ದನಕೇರಿ ಕ್ರಾಸ್‌ನಿಂದ ಬಾಗಲಕೋಟೆ ಮಾರ್ಗ ಮಧ್ಯೆ ಕಳ್ಳತನ ನಡೆದಿದೆ. 

ಬಾಗಲಕೋಟೆ(ಜೂ.13):  ಶಕ್ತಿ ಯೋಜನೆಯ ಕೆಎಸ್‌ಆರ್‌ಟಿಸಿ ಬಸ್‌ ರಶ್‌ ಎಫೆಕ್ಟ್ ನಿಂದಾಗಿ ರಶ್‌ ಆದ ಬಸ್‌ನಲ್ಲಿ ಕಳ್ಳರು ಕೈಚಳಕ ನಡೆಸಿ ಸೀಟ್‌ ಸಿಗದೇ ಬಸ್‌ನಲ್ಲಿ ನಿಂತಿದ್ದ ಅಜ್ಜಿಯ .30 ಸಾವಿರ ಹಣ ದೋಚಿದ ಘಟನೆ ಬಾಗಲಕೋಟೆ ಬಳಿಯ ಗದ್ದನಕೇರಿ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ.

ಬಾದಾಮಿಗೆ ಸಂಬಂಧಿ​ಕರೊಬ್ಬರಿಗೆ 30 ಸಾವಿರ ಹಣ ಕೊಡಲು ಹೊರಟಿದ್ದ ಅಜ್ಜಿ ಚೆನ್ನಮ್ಮ ಎಂಬ ವೃದ್ಧೆಯ ಹಣ ಕಳ್ಳತನವಾಗಿದೆ. ಗದ್ದನಕೇರಿ ಕ್ರಾಸ್‌ನಿಂದ ಬಾಗಲಕೋಟೆ ಮಾರ್ಗ ಮಧ್ಯೆ ಕಳ್ಳತನ ನಡೆದಿದೆ. ಅಜ್ಜಿ ಬ್ಯಾಗ್‌ನಲ್ಲಿದ್ದ .30 ಸಾವಿರ ಹಣವನ್ನು ಕಳ್ಳರು ಲಪಟಾಯಿಸಿದ್ದಾರೆ. ಮಹಿಳೆಯರು ಬಸ್‌ನಲ್ಲಿ ಹೆಚ್ಚು ಇದ್ದ ವೇಳೆ ಕಳ್ಳರ ಕೈಕಚಳಕ ಮಾಡಿದ್ದಾರೆ. ಬಾಗಲಕೋಟೆ ಬಸ್‌ಸ್ಟ್ಯಾಂಡ್‌ ಬಳಿ ಬರುತ್ತಿದ್ದಂತೆ ಬ್ಯಾಗ್‌ ನೋಡಿದಾಗ ಹಣ ಇರಲಿಲ್ಲ. ಈ ವೇಳೆ ವೃದ್ಧೆ ಕಣ್ಣೀರು ಹಾಕುತ್ತಾ ಪೊಲೀಸರ ಎದುರಿಗೆ ತನ್ನ ಅಳಲು ತೊಡಿಕೊಳ್ಳುತ್ತಿದ್ದಳು.

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ಭೀಕರ ಕಾರು ಅಪಘಾತ: ಚಾಲಕ ಸಾವು, ಮೂವರ ಸ್ಥಿತಿ ಗಂಭೀರ

ಲಗೇಜ್‌ ವಿಚಾರ; ಕಂಡಕ್ಟರ್‌ ಜೊತೆ ಮಹಿಳೆಯ ವಾಗ್ವಾದ!

ಲಗೇಜ್‌ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ ಜೊತೆ ಮಹಿಳಾ ಪ್ರಯಾಣಿಕರೊಬ್ಬರು ಕಂಡಕ್ಟರ್‌ ಜೊತೆ ವಾಗ್ವಾದ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಲಕಲ್‌ ಪಟ್ಟಣದಲ್ಲಿ ಸೋಮವಾರ ನಡೆದಿದೆ.

ಶಿರಾಡಿ: ಟ್ಯಾಂಕರ್‌ ಚಾಲಕನಿಗೆ ಹಲ್ಲೆಗೈದು ನಗದು ದರೋಡೆ

ಇಲಕಲ್‌ದಿಂದ ಮುದಗಲ್‌ ಮಾರ್ಗದ ಕಡೆಗೆ ಹೋಗುವ ಬಸ್‌ನಲ್ಲಿ ಈ ಮಹಿಳೆ ಪ್ಲಾಸ್ಟಿಕ್‌ ವಸ್ತುಗಳನ್ನು ಬಸ್‌ನ ಸೀಟ್‌ ಮೇಲೆ ಇಟ್ಟು ವ್ಯಾಪಾರಕ್ಕೆಂದು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಂಡಕ್ಟರ್‌ ಬಸ್‌ನಲ್ಲಿ ಸೀಟ್‌ ಮೇಲೆ ಲಗೇಜ್‌ ಇಟ್ಟರೆ ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತೆ. ಲಗೇಜ್‌ ಅನ್ನು ಸೀಟ್‌ ಬಿಟ್ಟು ಕೆಳಗೆ ಇರಿಸಿ ಎಂದು ಹೇಳಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಹಿಳೆ ನಿನ್ನೆಯವರಿಗೆ ಸುಮ್ಮನಿದ್ದು ಈಗ್ಯಾಕೆ ಹೀಗೆ ಮಾಡುತ್ತಿದ್ದೀರಿ. ಮಹಿಳೆಯರಿಗೆ ಉಚಿತ ಪ್ರಯಾಣ ಅಂತೀರಾ. ಹಾಗಾದ್ರೆ ನಮ್ಮಂಥವರ ಗೋಳು ಕೇಳುವವರು ಯಾರು? ನಮ್ಮ ಲಗೇಜ್‌ ಹಾಕಿದರೆ ನಡುದಾರಿಯಲ್ಲಿ ಇಳಿಸುತ್ತೇವೆ ಎಂದು ಕಂಡಕ್ಟರ್‌ ಹೇಳುತ್ತಾರೆ ಎಂದು ಮಹಿಳೆ ವಾಗ್ವಾದ ನಡೆಸಿದ್ದಾರೆ. ಆರ್ಡಿನರಿ ಬಸ್‌ನಲ್ಲಿ ಹಿಂದುಗಡೆ ಸೀಟ್‌ ಇರೋದಿಲ್ಲ. ಅಲ್ಲಿ ಹಾಕಿ ಲಗೇಜ್‌ ಕೊಂಡೊಯ್ಯರಿ ಎಂದು ಕಂಡಕ್ಟರ್‌ ಹೇಳಿದರೂ ಕೂಡ ಮಹಿಳೆ ಮಾತಿನ ಚಕಮಕಿ ಮುಂದುವರಿಸಿದ ವಿಡಿಯೊ ಇದೀಗ ವೈರಲ್‌ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!