ಬೆಂಗಳೂರು: ಕೆಂಪೇಗೌಡ ಲೇಔಟ್‌ನಲ್ಲಿ ವಿದ್ಯುತ್‌ ಉಪಕರಣಗಳನ್ನೇ ಎಗರಿಸಿದ ಖದೀಮರು..!

Published : Mar 20, 2024, 08:59 AM IST
ಬೆಂಗಳೂರು: ಕೆಂಪೇಗೌಡ ಲೇಔಟ್‌ನಲ್ಲಿ ವಿದ್ಯುತ್‌ ಉಪಕರಣಗಳನ್ನೇ ಎಗರಿಸಿದ ಖದೀಮರು..!

ಸಾರಾಂಶ

ಎನ್‌ಪಿಕೆಎಲ್‌ನ 1ರಿಂದ 9 ಬ್ಲಾಕ್‌ ಗಳಿಗೆ ಕೊಮ್ಮಘಟ್ಟದಲ್ಲಿ ನಿರ್ಮಿಸುತ್ತಿರುವ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸಂಪರ್ಕ ಕೊಡಲು ಬಡಾವಣೆಯ ಹಲವೆಡೆ ವಿದ್ಯುತ್ ಕಂಬಗಳು, ಲಿಂಕಿಂಗ್ ಬಾಕ್ಸ್ ಎಲೆಕ್ನಿಕ್ ವೈರ್‌ಗಳನ್ನು 2022 ಮಾರ್ಚ್‌ನಿಂದಲೂ ಅಳವಡಿಸಲಾಗುತ್ತಿತ್ತು. ಆದರೆ, ವಿದ್ಯುತ್ ಸಂಪರ್ಕವನ್ನು ಈವರೆಗೂ ಕೊಟ್ಟಿಲ್ಲ. ಹೀಗಾಗಿ ಖದೀಮರು ರಿಂಗ್‌ಮೈನ್ ಯೂನಿಟ್‌ಗೆ ಬೆಂಕಿ ಹಚ್ಚಿದ್ದು, ಅದರಲ್ಲಿದ್ದ ಕಾಪರ್‌ಪಟ್ಟಿಯನ್ನು ಕದ್ದಿದ್ದಾರೆ.

ಬೆಂಗಳೂರು(ಮಾ.20):  ನಾಡಪ್ರಭು ಕೆಂಪೇಗೌಡ ಬಡಾವಣೆಯ (ಎನ್‌ಪಿಕೆಎಲ್) ಬವಣೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ನಡುವೆ ಬಡಾವಣೆಗೆ ವಿದ್ಯುತ್ ಸಂಪರ್ಕಕ್ಕೆಂದು ಅಳವಡಿಸಲಾಗು ತ್ತಿರುವ ವಿದ್ಯುತ್‌ ಉಪಕರಣಗಳು ಕಳ್ಳತನ ಆಗುತ್ತಿರುವ ಹೊಸ ಸಮಸ್ಯೆ ಉದ್ಭವಿಸಿದ್ದು, ಬಿಡಿಎ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ತಲೆನೋವಾಗಿ ಪರಿಣಮಿಸಿದೆ.

ಎನ್‌ಪಿಕೆಎಲ್‌ನ 1ರಿಂದ 9 ಬ್ಲಾಕ್‌ ಗಳಿಗೆ ಕೊಮ್ಮಘಟ್ಟದಲ್ಲಿ ನಿರ್ಮಿಸುತ್ತಿರುವ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸಂಪರ್ಕ ಕೊಡಲು ಬಡಾವಣೆಯ ಹಲವೆಡೆ ವಿದ್ಯುತ್ ಕಂಬಗಳು, ಲಿಂಕಿಂಗ್ ಬಾಕ್ಸ್ ಎಲೆಕ್ನಿಕ್ ವೈರ್‌ಗಳನ್ನು 2022 ಮಾರ್ಚ್‌ನಿಂದಲೂ ಅಳವಡಿಸಲಾಗುತ್ತಿತ್ತು. ಆದರೆ, ವಿದ್ಯುತ್ ಸಂಪರ್ಕವನ್ನು ಈವರೆಗೂ ಕೊಟ್ಟಿಲ್ಲ. ಹೀಗಾಗಿ ಖದೀಮರು ರಿಂಗ್‌ಮೈನ್ ಯೂನಿಟ್‌ಗೆ ಬೆಂಕಿ ಹಚ್ಚಿದ್ದು, ಅದರಲ್ಲಿದ್ದ ಕಾಪರ್‌ಪಟ್ಟಿಯನ್ನು ಕದ್ದಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ವಕೀಲರ ಬೆನ್ನಿಗೆ ಚಾಕು ಇರಿದ ದುಷ್ಕರ್ಮಿ!

ಎಸ್‌ಟಿಪಿ 5ನಲ್ಲಿ ಕಾಪರ್ ಪ್ಲೇಟ್ ಅಳವಡಿಸುತ್ತಿದ್ದಸಿಬ್ಬಂದಿಗೆ ರಾತ್ರಿ ಹೊತ್ತಿನಲ್ಲಿ ಕದೀಮರು ಚಾಕು ತೋರಿಸಿ ದರೋಡೆ ಮಾಡಿದ್ದಾರೆ. ಅರ್ಥಿಂಗ್‌ಗೆಂದು ಅಳವಡಿಸಿದ್ದ ತಂತಿಯನ್ನು ಕತ್ತರಿಸಿಕೊಂಡು ಹೋಗಿದ್ದಾರೆ. ಬೀದಿ ದೀಪದ ಕಂಬಗಳಿಗೆ ಅಳವಡಿಸಲಾಗಿದ್ದ ಲಿಂಕ್ ಬಾಕ್ಸ್ ಗೆ ಹಾರೆಯಲ್ಲಿ ಒಡೆದು ಹಾಳು ಮಾಡಿದ್ದಾರೆ. ಕೆಲವೆಡೆ ಖದೀಮರು ವಿದ್ಯುತ್ ಉಪಕರಣಗಳು, ಪರಿಕರಗಳನ್ನು ಕಳ್ಳತನ ಮಾಡಿದ್ದರೆ, ಇನ್ನು ಹಲವೆಡೆ ಈ ವಸ್ತುಗಳನ್ನು ಹಾಳು ಮಾಡಿ ವಿಕೃತಿ ಮೆರೆದಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ದೂರು ನೀಡಲಾಗಿದೆ ಎಂದು ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ವಸಂತಕುಮಾರ್ ಅವರು 'ಕನ್ನಡಪ್ರಭ'ಕ್ಕೆ ಮಾಹಿತಿ
ನೀಡಿದರು.

ವಿದ್ಯುತ್‌ ಉಪಕರಣ ತೆರವು: ಬಡಾವಣೆಯಲ್ಲಿ ವಿದ್ಯುತ್ ಉಪಕರಣಗಳ ಕಳ್ಳತನ ಹೆಚ್ಚಾದ ಹಿನ್ನೆಲೆಯಲ್ಲಿ ಗುತ್ತಿಗೆ ಪಡೆದಿರುವ ಎಲ್ ಆ್ಯಂಡ್ ಟಿ ಮತ್ತು ಎಎಂ ಎಂಜಿನಿ ಯರ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯವರು ವಿವಿಧ ಬ್ಲಾಕ್‌ಗಳಲ್ಲಿ ಅಳವಡಿಸಲಾಗಿರುವ ವಿದ್ಯುತ್ ಉಪಕರಣಗಳು ಮತ್ತು ಪರಿಕರಣಗಳನ್ನು ತೆರವುಗೊಳಿಸುತ್ತಿದ್ದಾರೆ.

ಬಡಾವಣೆಯಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಂಡು ವಿದ್ಯುತ್ ಪೂರೈಕೆ ಆರಂಭಿಸಿದ ನಂತರ ಪುನಃ ಈ ಉಪಕರಣಗಳನ್ನು ಅಳವಡಿಸಲು ಯೋಜಿಸಿದ್ದಾರೆ ಎಂದು ಬಿಡಿಎ ಮೂಲಗಳು ಮಾಹಿತಿ ನೀಡಿವೆ. ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣ: ಕೊಮ್ಮಘಟ್ಟದಲ್ಲಿ ನಿರ್ಮಾಣವಾಗುತ್ತಿರುವ 3/31.5 ಎಂವಿಎ, 66/11 ಕೆವಿ ವಿದ್ಯುತ್ ಉಪ ಕೇಂದ್ರದ ಕಾರ್ಯ ಶೇ.90ರಷ್ಟು ಪೂರ್ಣಗೊಂಡಿದೆ. ಕೇವಲ ಶೇ.10ರಷ್ಟು ಮಾತ್ರ ಕಾಮಗಾರಿ ಬಾಕಿಯಿದೆ.

ಗದಗ ಕಾಂಗ್ರೆಸ್ ಕಾರ್ಯಕರ್ತನ ಅಟ್ಟಾಡಿಸಿ ಕೊಂದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು!

ಡಿಸೆಂಬರ್‌ನಲ್ಲಿಯೇ 66 ಎಚ್‌ವಿ(ಹೈವೋಲ್ವೇಜ್) ಕೇಬಲ್ ಅಳವಡಿಸಬೇಕಿತ್ತು. ಆದರೆ ಕೇಬಲ್ ತಯಾರಾದ ಬಳಿಕ ನಡೆದ ಟೆಸ್ಟ್‌ನಲ್ಲಿ ಫೇಲ್ ಆಗಿತ್ತು. ಇದರಿಂದಾಗಿ ಹೊಸ ಕೇಬಲ್ ತಯಾರಿಸಲಾಗುತ್ತಿದ್ದು, ಈ ತಿಂಗಳ ಅಂತ್ಯದಲ್ಲಿ ಕೇಬಲ್ ಬರಲಿದೆ. ನಂತರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ವಸಂತ ಕುಮಾರ್ ತಿಳಿಸಿದರು.

ಕೊಮ್ಮಘಟ್ಟದ ವಿದ್ಯುತ್ ಉಪಕೇಂದ್ರದ ಕಾಮಗಾರಿ ಪೂರ್ಣಗೊಳಿಸಿ ಎಲ್ಲ ಬಡಾವಣೆಗೆ ವಿದ್ಯುತ್ ಹರಿಸಿದ್ದರೆ, ಇಂತಹ ಕಳ್ಳತನ ತಡೆಯಬಹುದಿತ್ತು. ಶೀಘ್ರವೇ ವಿದ್ಯುತ್ ಹರಿಸಿ ಕಳ್ಳತನ ತಪ್ಪಿಸಬೇಕು. ಸೂಕ್ತ ಭದ್ರತೆ ಒದಗಿಸಬೇಕು ಎಂದು ಎನ್‌ ಪಿಕೆಎಲ್ ಮುಕ್ತ ವೇದಿಕೆ ಸೂರ್ಯಕಿರಣ್ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಿವ್ಯಾಂಗ ಯುವತಿ ಮೇಲೆ ಬಲಾತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!
ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!