ಕಲಬುರಗಿ: ಜೀವ ಬೆದರಿಕೆ ಹಾಕಿ ತಾಳಿಸರ ಸುಲಿಗೆ

Published : Dec 16, 2023, 10:09 PM IST
ಕಲಬುರಗಿ: ಜೀವ ಬೆದರಿಕೆ ಹಾಕಿ ತಾಳಿಸರ ಸುಲಿಗೆ

ಸಾರಾಂಶ

ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಲೇಡ್ ತೋರಿಸಿ ಜೀವ ಬೆದರಿಕೆ ಹಾಕಿ ಅವರ ಕೊರಳಲ್ಲಿದ್ದ 90 ಸಾವಿರ ರು. ಮೌಲ್ಯದ ತಾಳಿಸರ ಮತ್ತು ಅವರ ಮಗ ಬಳಿಯಿದ್ದ ₹700 ನಗದು ಸುಲಿಗೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. 

ಕಲಬುರಗಿ(ಡಿ.16): ಮಗನೊಂದಿಗೆ ಆಟೋದಲ್ಲಿ ಮನೆಗೆ ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಲೇಡ್ ತೋರಿಸಿ ಜೀವ ಬೆದರಿಕೆ ಹಾಕಿ ಅವರ ಕೊರಳಲ್ಲಿದ್ದ 90 ಸಾವಿರ ರು. ಮೌಲ್ಯದ ತಾಳಿಸರ ಮತ್ತು ಅವರ ಮಗ ಬಳಿಯಿದ್ದ ₹700 ನಗದು ಸುಲಿಗೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. 

ಸೇಡಂ ರಸ್ತೆಯ ಎನ್‍ಜಿಓ ಕಾಲೋನಿಯ ಪ್ರಿಯಾಂಕಾ ರಾಜಕುಮಾರ ಲೋಕಾಂಡೆ ಮತ್ತು ಅವರ ಮಗ ಅಕ್ಷಯ ಲೋಕಾಂಡೆ (16) ಅವರು ಮನೆಗೆ ಸಾಮಾನು ತರಲೆಂದು ಸುಪರ್ ಮಾರ್ಕೆಟ್‍ಗೆ ಹೋಗಿದ್ದಾರೆ. ಮನೆಗೆ ಬೇಕಾದ ಸಾಮಾನುಗಳನ್ನು ಖರೀದಿಸಿ ಸಿಟಿ ಸೆಂಟರ್ ಮಾಲ್ ಹತ್ತಿರ ಆಟೋ ಮುಗಿಸಿಕೊಂಡು ಓಂ ನಗರ ಗೇಟ್ ಹತ್ತಿರ ಬಿಡುವಂತೆ ಹೇಳಿದ್ದಾರೆ. 

ಆರೋಪಿಗಳಿಗೆ ನಕಲಿ ಶ್ಯೂರಿಟಿ: ಓರ್ವ ಮಹಿಳೆ ಸೇರಿ 8 ಮಂದಿ ಸೆರೆ

ಎಂ.ಆರ್.ಎಂ.ಸಿ.ಮೆಡಿಕಲ್ ಕಾಲೇಜು ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬ ಕೈ ಮಾಡಿ ಆಟೋ ನಿಲ್ಲಿಸಿ ಓಲ್ಡ್ ಆರ್‍ಟಿಒ ಕ್ರಾಸ್ ಹತ್ತಿರ ಇಳಿಯುವುದಾಗಿ ಹೇಳಿ ಜಬರದಸ್ತಿನಿಂದ ಆಟೋದಲ್ಲಿ ಹತ್ತಿ ಕುಳಿತಿದ್ದಾನೆ. ಮಹೇಂದ್ರ ಶೋರೂಂ ಹತ್ತಿರ ಗಲ್ಲಿಯಲ್ಲಿ ಹೋಗುವ ರಸ್ತೆಯಲ್ಲಿ ಆಟೋ ನಿಲ್ಲಿಸುವಂತೆ ಹೇಳಿ ಆಟೋ ನಿಲ್ಲಿಸಿ ಜೀವ ಬೆದರಿಕೆಯೊಡ್ಡಿ ತಾಳಿಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ಅವರು ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು