ಡ್ರಗ್ಸ್‌ ದಂಧೆ: ನೈಜೀರಿಯಾ ಪ್ರಜೆ ಸೇರಿ ಮೂವರ ಬಂಧನ

Published : Mar 05, 2021, 03:18 PM IST
ಡ್ರಗ್ಸ್‌ ದಂಧೆ: ನೈಜೀರಿಯಾ ಪ್ರಜೆ ಸೇರಿ ಮೂವರ ಬಂಧನ

ಸಾರಾಂಶ

ಆರೋಪಿಗಳಿಂದ 3.3 ಕೆ.ಜಿ. ಮಾದಕ ವಸ್ತು ಗಾಂಜಾ, ಮೂರು ಮೊಬೈಲ್‌, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ| ಹೊರಗಿನಿಂದ ಗಾಂಜಾವನ್ನು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳು| ವೀಸಾ ಮತ್ತು ಪಾಸ್‌ಪೋರ್ಟ್‌ ಅವಧಿ ಮುಕ್ತಾಯವಾಗಿದ್ದು, ನಗರದಲ್ಲಿ ಅಕ್ರಮವಾಗಿ ವಾಸವಿದ್ದ ನೈಜೀರಿಯಾ ಪ್ರಜೆ| 

ಬೆಂಗಳೂರು(ಮಾ.05):  ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಮೂವರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೈಜೀರಿಯಾ ಪ್ರಜೆ ವ್ಯಾಲೈಂಟನ್‌ ಚಿನೆದು (31), ಕಾಡುಗೋಡಿಯ ಸಿರಾಜ್‌ (35), ತಮಿಳುನಾಡಿನ ಮೇಘನಾಥನ್‌ (24) ಬಂಧಿತರು. ಆರೋಪಿಗಳಿಂದ 3.3 ಕೆ.ಜಿ. ಮಾದಕ ವಸ್ತು ಗಾಂಜಾ, ಮೂರು ಮೊಬೈಲ್‌, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಾದಕ ವಸ್ತು ಮಾರಾಟ: ಇಬ್ಬರು ನೈಜೀ​ರಿಯಾ ಪ್ರಜೆ​ಗ​ಳ ಬಂಧನ

ಕೆ.ಚನ್ನಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿರುವ ನೈಜೀರಿಯಾ ಪ್ರಜೆ ವ್ಯಾಲೈಂಟನ್‌ ತಮಿಳುನಾಡು ಮೂಲದ ಮೇಘನಾಥನ್‌ ಹಾಗೂ ಸಿರಾಜ್‌ ಸಂಪರ್ಕ ಹೊಂದಿದ್ದ. ಹೊರಗಿನಿಂದ ಗಾಂಜಾವನ್ನು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಆರೋಪಿಗಳು ಸಾರಾಯಿಪಾಳ್ಯದ ಸಾದಿಕ್‌ ಮಸೀದಿ ಬಳಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದರು. 

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ನೈಜೀರಿಯಾ ಪ್ರಜೆಯ ವೀಸಾ ಮತ್ತು ಪಾಸ್‌ಪೋರ್ಟ್‌ ಅವಧಿ ಮುಕ್ತಾಯವಾಗಿದ್ದು, ನಗರದಲ್ಲಿ ಅಕ್ರಮವಾಗಿ ವಾಸವಿದ್ದ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
Shivamogga: 14 ವರ್ಷ ಜೈಲು ಶಿಕ್ಷೆ ಅನುಭವಿಸಿದ್ರು ಬದಲಾಗಲಿಲ್ಲ; ತಂದೆಯನ್ನು ಕೊಲೆಗೈದು ಬಾವಿಗೆ ಎಸೆದ ಮಗ!