ಕಲಬುರಗಿ: ಲಾರಿ ತಡೆದು ದರೋಡೆ ಮಾಡುತ್ತಿದ್ದ ಖದೀಮರು, ಪತ್ರಕರ್ತ ಸೇರಿ ಮೂವರ ಬಂಧನ

Suvarna News   | Asianet News
Published : Oct 28, 2020, 02:03 PM IST
ಕಲಬುರಗಿ: ಲಾರಿ ತಡೆದು ದರೋಡೆ ಮಾಡುತ್ತಿದ್ದ ಖದೀಮರು, ಪತ್ರಕರ್ತ ಸೇರಿ ಮೂವರ ಬಂಧನ

ಸಾರಾಂಶ

ಅಕ್ಕಿ ಲಾರಿ ತಡೆದು ಚಾಲಕನ ಮೇಲೆ ಹಲ್ಲೆ ಮಾಡಿ ಐದು ಲಕ್ಷ ರೂ. ಗೆ ಡಿಮ್ಯಾಂಡ್ ಇಟ್ಟಿದ್ದ ಖದೀಮರು| ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರ್ ಗ್ರಾಮದ ಬಳಿ ನಡೆದ ಘಟನೆ| ಹಣ ಕೊಡೋಕೆ ಒಪ್ಪದಿದ್ದಾಗ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಪೊಲೀಸರಿಗೆ ಒಪ್ಪಿಸುವುದಾಗಿ ಬೆದರಿಸಿದ್ದ ದರೋಡೆಕೋರರು| 

ಕಲಬುರಗಿ(ಅ.28): ಲಾರಿ ತಡೆದು ದರೋಡೆ ಮಾಡುತ್ತಿದ್ದ ಪತ್ರಕರ್ತ, ರೌಡಿಶೀಟರ್ ಸೇರಿದಂತೆ ಮೂವರು ಖದೀಮರು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರ್ ಗ್ರಾಮದ ಬಳಿ ಇಂದು(ಬುಧವಾರ) ನಡೆದಿದೆ. ಈ ಖದೀಮರ ತಂಡ ಕಲ್ಲೂರ್- ಅವರಾದ್ ಗ್ರಾಮಗಳ ಮಧ್ಯೆ ಲಾರಿಗಳನ್ನ ತಡೆದು ದರೋಡೆ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. 

ಸಂಯುಕ್ತ ಕರ್ನಾಟಕ ಪತ್ರಿಕೆ ತಾಲೂಕಾ ವರದಿಗಾರ ಮತ್ತು ಕಲ್ಯಾಣ ಕರ್ನಾಟಕ ವೆಬ್ ನ್ಯೂಸ್ ಚಾನೆಲ್‌ನ ವರದಿಗಾರ ಗಿರೀಶ್ ತುಂಬಗಿ, ರವಿಚಂದ್ರ ಹಾಗೂ ರೌಡಿಶೀಟರ್ ಗುಂಡು ಗುತ್ತೇದಾರ್ ಬಂಧಿತ ಆರೋಪಿಗಳಾಗಿದ್ದಾರೆ. 
ಈ ಖದೀಮರ ತಂಡ ಅಕ್ಕಿ ಲಾರಿ ತಡೆದು ಚಾಲಕನ ಮೇಲೆ ಹಲ್ಲೆ ಮಾಡಿ ಐದು ಲಕ್ಷ ರೂ. ಗೆ ಡಿಮ್ಯಾಂಡ್ ಇಟ್ಟಿತ್ತು. ಹಣ ಕೊಡೋಕೆ ಒಪ್ಪದಿದ್ದಾಗ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಪೊಲೀಸರಿಗೆ ಒಪ್ಪಿಸುವುದಾಗಿ ಬೆದರಿಸಿದ್ದರು ಎಂದು ಹೇಳಲಾಗಿದೆ. ದರೋಡೆಕೋರರಿಗೆ ಹೆದರಿದ ಲಾರಿ ಮಾಲೀಕ 3.50 ಲಕ್ಷ ರೂ ಹಣವನ್ನ ಆನ್‌ಲೈನ್ ಮೂಲಕ ಖದೀಮರಿಗೆ ಪಾವತಿಸಿದ್ದರು. ಹಲ್ಲೆ ಮತ್ತು ಹಣಕಾಸಿನ ವ್ಯವಹಾರವನ್ನ ಮೊಬೈಲ್‌ನಲ್ಲಿ ಚಿತ್ರಿಕರಿಸಲಾಗಿತ್ತು. 

ಮಹಾರಾಷ್ಟ್ರದ ಚಾಳಿಗೆ ಮೊದ್ಲು ಮೂಗುದಾರ ಹಾಕ್ರಿ: ಮಹಿಳೆಯ ಮಾತಿಗೆ ದಂಗಾದ ಸಿದ್ದರಾಮಯ್ಯ..!

ಈ ಸಂಬಂಧ ಲಾರಿ ಮಾಲೀಕ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಲಾರಿ ಮಾಲೀಕನ ದೂರಿನ ಮೇರೆಗೆ ಜೇವರ್ಗಿ ಠಾಣೆಯ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. ಬಂಧಿತರಿಂದ ನಗದು ಹಣ, ಕಾರು ಮತ್ತು ಯು ಟ್ಯೂಬ್ ಚಾನೆಲ್‌ನ ಲೋಗೋವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!