
ಚಿಕ್ಕಬಳ್ಳಾಪುರ(ಡಿ.17): ಶುಕ್ರವಾರ ಮಧ್ಯ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಮನೆಗಳ ಬಾಗಿಲು ಬಡಿಯುತ್ತಿದ್ದ ವ್ಯಕ್ತಿಯನ್ನು ಅಕ್ಕಪಕ್ಕದ ನಿವಾಸಿಗಳು ಹಿಡಿದು ಥಳಿಸಿದ ಕಾರಣ ಆ ವ್ಯಕ್ತಿ ಮೃತಪಟ್ಟ ಘಟನೆ ಜಿಲ್ಲೆಯ ಗೌರಿಬಿದನೂರು ನಗರದ ಕರೇಕಲ್ಲಹಳ್ಳಿಯ ಸ್ವಾಗತ್ ಬಡಾವಣೆಯಲ್ಲಿ ನಡೆದಿದೆ.
ಮೃತನನ್ನು ಬೆಂಗಳೂರಿನ ಆರ್.ಟಿ.ನಗರದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಮದ್ಯವಸನಿಯಾಗಿದ್ದ ಈತನನ್ನು ಪತ್ನಿ ಹಾಗೂ ಮಕ್ಕಳು 7 ತಿಂಗಳ ಹಿಂದೆಯೇ ಮನೆಯಿಂದ ಆಚೆ ಹಾಕಿದ್ದರಂತೆ.
ಮಹಿಳೆ ಮೇಲೆ ರೇಪ್ ಮಾಡಿ, ಮದ್ಯ ಸುರಿದು ಬೆಂಕಿ ಹಚ್ಚಿದ ಪಾಪಿ!
ಮಂಜುನಾಥ ಗೌರಿಬಿದನೂರು ನಗರದಲ್ಲಿ ಕೂಲಿ-ನಾಲಿ ಮಾಡಿಕೊಂಡು ಮದ್ಯ ವ್ಯಸನಿಯಾಗಿದ್ದ. ಕಳ್ಳನೆಂದು ಭಾವಿಸಿ ಈತನನ್ನು ಹೊಡೆದು ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮಂಜುನಾಥನ ಸಂಬಂಧಿಗಳು ನೀಡಿದ ದೂರಿನ ಮೇರೆಗೆ ಆರೋಪಿಗಳಾದ ಅಂಬರೀಶ, ಸುನಿಲ್, ಕೈಲಾಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಮೂವರನ್ನೂ ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ