
ಬೆಳಗಾವಿ(ಫೆ.20): ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯ ಅದ್ಧೂರಿ ಅಲಿಯಾಸ್ ಹಾಲಪ್ಪ ಸುರೇಶ ಬಬಲೇಶ್ವರ್, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಇಬ್ಬರು 16 ವರ್ಷದ ಬಾಲಕಿಯರು ಮತ್ತು 15 ವರ್ಷದ ಒಬ್ಬ ಬಾಲಕಿಯನ್ನು ದೇವಸ್ಥಾನದ ಬಳಿ ಹೋಗುತ್ತಿದ್ದಾಗ ಬಲವಂತವಾಗಿ ತಮ್ಮ ಕಾರಿನಲ್ಲಿ ಕೂಡ್ರಿಸಿಕೊಂಡು, ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಲೈಂಗಿಕ ದೌರ್ಜನ್ಯ: ಸ್ಯಾಂಡಲ್ವುಡ್ ನಟನ ವಿರುದ್ಧ ಯುವತಿ ದೂರು
ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ ಎಂದೂ ದೂರಿನಲ್ಲಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ