ಚಾಮರಾಜನಗರ: ಮಾದಪ್ಪನ ಸನ್ನಿಧಿಯಲ್ಲಿ ಗಾಂಜಾ ಮಾರಾಟ, ಮೂವರ ಬಂಧನ

Published : Aug 09, 2023, 10:15 PM IST
ಚಾಮರಾಜನಗರ: ಮಾದಪ್ಪನ ಸನ್ನಿಧಿಯಲ್ಲಿ ಗಾಂಜಾ ಮಾರಾಟ, ಮೂವರ ಬಂಧನ

ಸಾರಾಂಶ

ಆರೋಪಿಗಳಿಂದ ಮಾರಾಟ ಮಾಡಲು ಯತ್ನಿಸುತ್ತಿದ್ದ 200 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು. 

ಹನೂರು(ಆ.09): ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ ಬೆಟ್ಟದ ಮುಡಿಶೆಡ್‌ ಸಮೀಪದ ಹಣ್ಣು ಕಾಯಿ ಮಾರಾಟ ಕೇಂದ್ರದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಅಭಿಷೇಕ್‌ (23), ಹಾವೇರಿಯ ಆದರ್ಶ (22) ಹಾಗೂ ಮೈಸೂರಿನ ಉದಯಕುಮಾರ್‌ (22) ಬಂಧಿತ ಆರೋಪಿಗಳು. ಆರೋಪಿಗಳಿಂದ ಮಾರಾಟ ಮಾಡಲು ಯತ್ನಿಸುತ್ತಿದ್ದ 200 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಚಾಮರಾಜನಗರ: ಶಿವನಸಮುದ್ರದಲ್ಲಿ ಸಿಲುಕಿದ 6 ಮಂದಿ ಕುಟುಂಬ, ಸ್ಥಳಿಯರಿಂದ ಬಚಾವ್‌

ಮಾದಪ್ಪನ ಹುಂಡಿಯಲ್ಲಿ 2.47 ಕೋಟಿ ಸಂಗ್ರಹ

ಹನೂರು : ಪ್ರಸಿದ್ಧ ಯಾತ್ರಾತಾಣ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯ ಹುಂಡಿಯಲ್ಲಿ ಒಂದು ವಾರದ ಅವಧಿಯಲ್ಲಿ 2.47 ಕೋಟಿ ರು.ಸಂಗ್ರಹವಾಗಿದೆ. 2023ರ ಮೆ 30 ರಿಂದ ಜು.5 ರವರೆಗೆ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಮಲೆಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಳಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹಾಗೂ ಬಿಗಿ ಪೊಲೀಸ್‌ ಬಂದೋಬಸ್‌್ತನಲ್ಲಿ ಎಣಿಕೆ ಮಾಡಲಾಯಿತು. ಈ ಬಾರಿ ರಾಜ್ಯದ ಹಲವು ಜಿಲ್ಲೆಗಳು ಸೇರಿದಂತೆ ನೆರೆ ರಾಜ್ಯದಿಂದಲೂ ಲಕ್ಷಾಂತರ ಜನರು ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದರು, ಶಕ್ತಿ ಯೋಜನೆಯ ಹಿನ್ನೆಲೆಯಲ್ಲಿ ಕಳೆದ 36 ದಿನ ಗಳ ಅವಧಿಯಲ್ಲಿ 2,4715,655 ರು. ಹಾಗೂ 77 ಗ್ರಾಂ ಚಿನ್ನ ಹಾಗೂ 2.250 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!