ಬೆಂಗ್ಳೂರಲ್ಲಿ ವೇಶ್ಯಾವಾಟಿಕೆ ದಂಧೆ: ಮಹಿಳೆ ಸೇರಿ ಮೂವರ ಬಂಧನ

Published : Nov 24, 2022, 07:50 AM IST
ಬೆಂಗ್ಳೂರಲ್ಲಿ ವೇಶ್ಯಾವಾಟಿಕೆ ದಂಧೆ: ಮಹಿಳೆ ಸೇರಿ ಮೂವರ ಬಂಧನ

ಸಾರಾಂಶ

ಉದ್ಯೋಗ ಆಮಿಷವೊಡ್ಡಿ ನೆರೆ ರಾಜ್ಯದ ಯುವತಿಯರ ಕರೆತಂದು ದಂಧೆ

ಬೆಂಗಳೂರು(ನ.24):  ಉದ್ಯೋಗದ ಆಮಿಷವೊಡ್ಡಿ ನೆರೆ ರಾಜ್ಯದ ಮಹಿಳೆಯರು ಹಾಗೂ ಯುವತಿಯರನ್ನು ನರ್ಸಿಂಗ್‌ ಸೆಂಟರ್‌ಗೆ ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಸೇರಿ ಮೂವರನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂಜಯನಗರದ ನಾಗಶೆಟ್ಟಿಹಳ್ಳಿ ನಿವಾಸಿ ಅರ್ಚನಾ(37), ದಾವಣಗೆರೆ ಜಿಲ್ಲೆಯ ರಾಘವೇಂದ್ರ (30), ತುಮಕೂರಿನ ಮಂಜುನಾಥ್‌ (33) ಬಂಧಿತರು. ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಇತ್ತೀಚೆಗೆ ಬಳೇಪೇಟೆಯ ಕೆವಿ ಟೆಂಪಲ್‌ ಸ್ಟ್ರೀಟ್‌ನಲ್ಲಿರುವ ಗಂಧರ್ವ ಡಿಲಕ್ಸ್‌ ಲಾಡ್ಜ್‌ನಲ್ಲಿ ಅಕ್ರಮವಾಗಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ನಿಜಕ್ಕೂ ದುರಂತ: ಬೆಂಗಳೂರಿನಲ್ಲಿ ಬಾಂಬೆ ಮಾದರಿಯ ವೇಶ್ಯಾವಾಟಿಕೆ

ಆರೋಪಿ ಅರ್ಚನಾ ಸಂಜಯ ನಗರದಲ್ಲಿ ಸಿಬಿಕಾ ಆ್ಯಂಡ್‌ ಆಯು ಸೆಂಟರ್‌(ಬ್ಯೂರೋ ಆಫ್‌ ಕ್ವಾಲಿಫೈಡ್‌ ನರ್ಸ್‌ ಆ್ಯಂಡ್‌ ಆಯು) ಎಂಬ ಹೆಸರಿನಲ್ಲಿ ನರ್ಸಿಂಗ್‌ ಸೆಂಟರ್‌ ನಡೆಸುತ್ತಿದ್ದಾಳೆ. ನರ್ಸಿಂಗ್‌ ತರಬೇತಿಗಾಗಿ ಬರುವ ಯುವತಿಯರು ಹಾಗೂ ಮಹಿಳೆಯರಿಗೆ ಉದ್ಯೋಗ ಹಾಗೂ ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ದೂಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?