ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ನೌಕರಿ ಕೊಡಿಸೋದಾಗಿ ಲಕ್ಷಾಂತರ ರೂ.ವಂಚನೆ, ಮೂವರ ಬಂಧನ

Published : Dec 21, 2024, 11:30 AM IST
ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ನೌಕರಿ ಕೊಡಿಸೋದಾಗಿ ಲಕ್ಷಾಂತರ ರೂ.ವಂಚನೆ, ಮೂವರ ಬಂಧನ

ಸಾರಾಂಶ

ಬೆಂಗಳೂರು ಹಾಗೂ ವಿಜಯಪುರದಲ್ಲಿ ಆರೋಪಿಗಳಿಗೆ ನಗದು ಮಾತ್ರವಲ್ಲದೆ ಆನ್ ಲೈನ್ ಮೂಲಕ ಸಹ ಹಣ ಸಂದಾಯವಾಗಿತ್ತು. ಹಣ ಪಡೆದ ಬಳಿಕ ಕೆಲವರಿಗೆ ನಕಲಿ ನೇಮಕಾತಿ ಆದೇಶವನ್ನು ಲಕ್ಷ್ಮೀಕಾಂತ್ ಗ್ಯಾಂಗ್‌ ವಿತರಿಸಿತ್ತು. 

ಬೆಂಗಳೂರು(ಡಿ.21): ಕೇಂದ್ರ ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಸಂಗ್ರಹ ಕಾರ (ಟಿ.ಸಿ) ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ 80 ಲಕ್ಷ ರು. ವಸೂಲಿ ಮಾಡಿ ನಕಲಿ ನೇಮಕಾತಿ ಆದೇಶ ವಿತರಿಸಿ ವಂಚಿಸಿದ ಮೂವರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. 

ಕಲಬುರಗಿಯ ವಿದ್ಯಾನಗರದ ಲಕ್ಷ್ಮಿಕಾಂತ್ ಹೊಸ ಮನಿ, ಅಫ‌ಲಪುರ ತಾಲೂಕಿನ ಉಡಚಣ ಗ್ರಾಮದ ಕುಲ ಪ್ಪಸಿಂಗೇ ಹಾಗೂ ಉತ್ತರಹಳ್ಳಿಯ ಮುರಳಿ ಬಂಧಿತರು. ಇದೇ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ವಿಜಯಪುರ ಜಿಲ್ಲೆಯ ಭೀಮರಾವ್, ಬಸು ಕಾಸಪ್ಪ ಮಯೂರ, ಶ್ರೀಧರ್, ಸಂತೋಷ ನಾಯಕ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ. 

ಚಿನ್ನ ಖರೀದಿಸಿ 2.42 ಕೋಟಿ ಮೋಸ: ಮಾಜಿ ಸಚಿವ ವರ್ತೂರ್‌ ಪ್ರಕಾಶ್‌ ಆಪ್ತೆ ಅರೆಸ್ಟ್‌

ವಿಜಯಪುರ ಜಿಲ್ಲೆಯ ಆಲಮೇಲದ ಹುಸನಪ್ಪ ಮಾಡ್ಯಾಳ ಅವರು ಸಿಸಿಬಿ ಠಾಣೆಗೆ ನೀಡಿದ ದೂರಿನ ಅನ್ವಯ ತನಿಖೆಗಿಳಿದ ಸಿಸಿಬಿ ಇನ್ಸ್‌ಪೆಕ್ಟ‌ರ್ ದೇವೇಂದ್ರಪ್ಪ ನೇತೃತ್ವದ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ನಗರದ ಮೌರ್ಯ ಹೋಟೆಲ್ ಜಂಕ್ಷನ್ ಮತ್ತು ಹೊಸಕೆರೆ ಹಳ್ಳಿ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಿದೆ. 

ಕಲಬುರಗಿಯ ಲಕ್ಷ್ಮೀಕಾಂತ್ ಎಲೆಕ್ಟಿಕ್ ಗುತ್ತಿಗೆದಾರನಾಗಿದ್ದು, ತನಗೆ ಸರ್ಕಾರದ ಮಟ್ಟದಲ್ಲಿ ಒಳ್ಳೆಯ ಸಂಪರ್ಕವಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದ. ನಿರುದ್ಯೋಗಿಗಳಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟಿಸಿ ಹುದ್ದೆಗಳನ್ನು ಕೊಡಿಸುತ್ತೇನೆಂದು ಹೇಳಿ ಅವರ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಹಣದ ಬೇಡಿಕೆ ಇಟ್ಟಿದ್ದ. ಇದಕ್ಕೊಪ್ಪಿದ ಉದ್ಯೋಗಾಂಕ್ಷಿಗಳಲ್ಲಿ ತಲಾ ಒಬ್ಬರಿಂದ 16 ರಿಂದ 20 ಲಕ್ಷರು. ಹಣವನ್ನು ವಸೂಲಿ ಮಾಡಿ ಲಕ್ಷ್ಮೀಕಾಂತ್ ಗ್ಯಾಂಗ್ ಹಂಚಿಕೊಂಡಿತ್ತು.

ಬೆಂಗಳೂರು: ಒಂದೇ ಮನೆ 12 ಜನಕ್ಕೆ ಲೀಸ್‌, 1 ಕೋಟಿ ವಂಚನೆ!

ನಿರ್ದೇಶಕ ಮುರಳಿ 

ಬಂಧನಕ್ಕೆ ಒಳಗಾದ ಆರೋಪಿ ಮುರಳಿ ತಮಿಳು ಕಿರುತೆರೆಯಲ್ಲಿ ಸಹಾಯಕ ನಿರ್ದೇಶಕನಾಗಿದ್ದು, ಅಫಜಲ್‌ಪುರದ ಸಿಂಗೇ ಕೃಷಿ ಮಾಡಿಕೊಂಡಿದ್ದ. ಹಣದಾಸೆಗೆ ಈ ವಂಚನೆ ಕೃತ್ಯದಲ್ಲಿ ಇಬ್ಬರು ಪಾಲ್ಗೊಂಡಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತರಬೇತಿಗೆ ತೆರಳಿದಾಗ ನಕಲಿ ನೇಮಕಾತಿ ಆದೇಶ: 

ಕೃತ್ಯ ಬಯಲು 2022-23ರ ಸಾಲಿನಲ್ಲಿ ಈ ವಂಚನೆ ನಡೆದಿದೆ. ಬೆಂಗಳೂರು ಹಾಗೂ ವಿಜಯಪುರದಲ್ಲಿ ಆರೋಪಿಗಳಿಗೆ ನಗದು ಮಾತ್ರವಲ್ಲದೆ ಆನ್ ಲೈನ್ ಮೂಲಕ ಸಹ ಹಣ ಸಂದಾಯವಾಗಿತ್ತು. ಹಣ ಪಡೆದ ಬಳಿಕ ಕೆಲವರಿಗೆ ನಕಲಿ ನೇಮಕಾತಿ ಆದೇಶವನ್ನು ಲಕ್ಷ್ಮೀಕಾಂತ್ ಗ್ಯಾಂಗ್‌ ವಿತರಿಸಿತ್ತು. ರೈಲ್ವೆಯಲ್ಲಿ ಉದ್ಯೋಗ ಸಿಕ್ಕಿದ ಖುಷಿಯಲ್ಲಿ ಸಂತ್ರಸ್ತರಿಗೆ ಮುಂಬೈ ಹಾಗೂ ಉತ್ತರಪ್ರದೇಶದ ಕಾನ್ಪುರಕ್ಕೆ ತರಬೇತಿ ಸಲುವಾಗಿ ಆರೋಪಿಗಳು ಕಳುಹಿಸಿದ್ದರು. ಆದರೆ ಅಲ್ಲಿಗೆ ತೆರಳಿದ ಅಭ್ಯರ್ಥಿ ಗಳ ದಾಖಲೆಗಳನ್ನು ರೈಲ್ವೆ ಅಧಿಕಾರಿಗಳು ಪರಿಶೀಲಿ ಸಿದಾಗ ನಕಲಿ ನೇಮಕಾತಿ ಆದೇಶ ಎಂಬುದು ಗೊತ್ತಾಗಿದೆ. ಕೊನೆಗೆ ತಾವು ಮೋಸ ಹೋಗಿರುವು ದಾಗಿ ಅರಿತು ಪೊಲೀಸರಿಗೆ ದೂರು ಕೊಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ