ಹಾಸನ: ಕೈದಿಗಳಿಗೆ ಸೇಬು, ಮೂಸಂಬಿಯಲ್ಲಿ ಗಾಂಜಾ ನೀಡುತ್ತಿದ್ದ ಮೂವರ ಸೆರೆ

Published : Sep 06, 2023, 03:00 AM IST
ಹಾಸನ: ಕೈದಿಗಳಿಗೆ ಸೇಬು, ಮೂಸಂಬಿಯಲ್ಲಿ ಗಾಂಜಾ ನೀಡುತ್ತಿದ್ದ ಮೂವರ ಸೆರೆ

ಸಾರಾಂಶ

ಸೇಬು ಹಾಗೂ ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂಜಾ ಸೊಪ್ಪನ್ನು ಇಟ್ಟು, ಸ್ಟಿಕ್ಕರ್‌ ಅಂಟಿಸಿ, ಹಣ್ಣುಗಳನ್ನು ಜೈಲಿನ ಹಿಂಬದಿಯಿಂದ ಕಾಂಪೌಂಡ್‌ ಒಳಗಡೆಗೆ ಎಸೆಯಲು ಇವರು ಹೊಂಚು ಹಾಕುತ್ತಿದ್ದ ಬಂಧಿತ ಆರೋಪಿಗಳು. 

ಹಾಸನ(ಸೆ.06):  ಸೇಬು ಹಾಗೂ ಮೂಸಂಬಿ ಹಣ್ಣಿನ ಒಳಗೆ ಗಾಂಜಾ ಸೊಪ್ಪು ಇಟ್ಟು ಜಿಲ್ಲಾ ಉಪ ಕಾರಾಗೃಹದಲ್ಲಿನ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಯತ್ನಿಸುತ್ತಿದ್ದ ಮೂವರನ್ನು ನಗರಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಬೇಡ್ಕರ್‌ ನಗರದ ತರಕಾರಿ ವ್ಯಾಪಾರಿ ತಬ್ರೀಝ(28), ಪೆನ್‌ಷನ್‌ ಮೊಹಲ್ಲಾದ ಗುಜರಿ ಅಂಗಡಿ ವ್ಯಾಪಾರಿ ವಾಸಿಂ (21), ರಕೀಬ್‌ ಬಂಧಿತ ಆರೋಪಿಗಳು. 

ಬೀದರ್: ಸಿನಿಮಿಯ ರೀತಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಖದೀಮರ ಬಂಧನ

ಸೇಬು ಹಾಗೂ ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂಜಾ ಸೊಪ್ಪನ್ನು ಇಟ್ಟು, ಸ್ಟಿಕ್ಕರ್‌ ಅಂಟಿಸಿ, ಹಣ್ಣುಗಳನ್ನು ಜೈಲಿನ ಹಿಂಬದಿಯಿಂದ ಕಾಂಪೌಂಡ್‌ ಒಳಗಡೆಗೆ ಎಸೆಯಲು ಇವರು ಹೊಂಚು ಹಾಕುತ್ತಿದ್ದರು. ಇದಕ್ಕಾಗಿ ಜೈಲಿನ ಸಮೀಪದ ಹಳೇಬಸವಣ್ಣ ವೃತ್ತದ ಬಳಿ ಆರೋಪಿಗಳು ಓಡಾಡುತ್ತಿದ್ದರು. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದ ಪೊಲೀಸರು, ಅವರ ಬಳಿಯಿದ್ದ ಬ್ಯಾಗ್‌ ಪರಿಶೀಲಿಸಿದಾಗ ಗಾಂಜಾ ತುಂಬಿದ್ದ 3 ಸೇಬು ಮತ್ತು 2 ಮೂಸಂಬಿ ಹಣ್ಣುಗಳು ಪತ್ತೆಯಾಗಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ