ಬೆಂಗಳೂರು: ಅಡಕೆ ವ್ಯಾಪಾರಿಯ 80 ಲಕ್ಷ ದೋಚಿ ಜೂಜಾಟ, ನಕಲಿ ಪೊಲೀಸರ ಸೆರೆ

Published : Jan 29, 2023, 06:39 AM IST
ಬೆಂಗಳೂರು: ಅಡಕೆ ವ್ಯಾಪಾರಿಯ 80 ಲಕ್ಷ ದೋಚಿ ಜೂಜಾಟ, ನಕಲಿ ಪೊಲೀಸರ ಸೆರೆ

ಸಾರಾಂಶ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌ನನ್ನು ಅಡ್ಡಗಟ್ಟಿ ಹಣ ದೋಚಿದ್ದ ಆರೋಪಿಗಳು. 

ಬೆಂಗಳೂರು(ಜ.29): ಇತ್ತೀಚೆಗೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಡಕೆ ಮಂಡಿ ವ್ಯಾಪಾರಿಗೆ ಸಂಬಂಧಿಸಿದ 80 ಲಕ್ಷ ಸಾಗಿಸುವಾಗ ಅವರ ಕಾರು ಚಾಲಕನನ್ನು ಪೊಲೀಸರ ವೇಷದಲ್ಲಿ ಅಡ್ಡಗಟ್ಟಿ ದರೋಡೆ ಮಾಡಿದ್ದ ಮೂವರನ್ನು ವಿಲ್ಸನ್‌ ಗಾರ್ಡನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಕಡಪ ಜಿಲ್ಲೆಯ ಭತಲ್‌ ಶಿವರಾಮ್‌ ಅಲಿಯಾಸ್‌ ಗಲ್ಲಿ ರೌಡಿ ಹಾಗೂ ತಿರುಪತಿಯ ಜೈಲಿನಲ್ಲಿದ್ದ ಶೇಖ್‌ ಚಂಪತಿಲಾಲ್‌ ಬಾಷ ಅಲಿಯಾಸ್‌ ಸಾಬು ಹಾಗೂ ಆತನ ಸೋದರ ಶೇಖ್‌ ಚೆಂಪತಿ ಜಾಕೀರ್‌ ಬಂಧಿಸಿದ್ದು, ಆರೋಪಿಗಳಿಂದ 37 ಲಕ್ಷ ಜಪ್ತಿ ಮಾಡಲಾಗಿದೆ. ಉಳಿದ ಹಣವನ್ನು ಜೂಜು, ಮೋಜು ಮಾಡಿ ಕಳೆದಿದ್ದಾರೆ. ಕೆಲ ದಿನಗಳ ಹಿಂದೆ ಗುಬ್ಬಿ ತಾಲೂಕಿನ ತವಡೇಹಳ್ಳಿ ಗ್ರಾಮದ ಅಡಿಕೆ ಮಂಡಿ ಮಾಲಿಕ ಮೋಹನ್‌ ಅವರ ಕಾರು ಚಾಲಕ ಚಂದನ್‌ನನ್ನು ಅಡ್ಡಗಟ್ಟಿ ಆರೋಪಿಗಳು ಹಣ ದೋಚಿದ್ದರು.

Davanagere: ಹಣಕಾಸಿನ ಜಗಳ ಮಧ್ಯೆ ಪ್ರವೇಶಿಸಿದ ಪೊಲೀಸರ ಮೇಲೆ ಹಲ್ಲೆ: ಯುವತಿಯರು ಸೇರಿ ನಾಲ್ವರ ಬಂಧನ

ಹವಾಲಾ ದಂಧೆ ಮಾಹಿತಿ ತಿಳಿದು ದರೋಡೆ

ಶೇಖ್‌ ಸೋದರರು ರಕ್ತಚಂದನ ಅಕ್ರಮ ಸಾಗಾಣಿಕೆ ಹಾಗೂ ಹವಾಲಾ ದಂಧೆಯಲ್ಲಿ ಮಾಡುತ್ತಿದ್ದು, ಶೇಖ್‌ ಚಂಪತಿ ಲಾಲ್‌ ಬಾಷ ಮೇಲೆ 53 ಪ್ರಕರಣ, ಸೋೕದರ ಜಾಕೀರ್‌ ಮೇಲೆ 35 ಪ್ರಕರಣಗಳು ದಾಖಲಾಗಿವೆ. ರಕ್ತಚಂದನ ಸಾಗಣೆ ಸಂಬಂಧ ಹವಾಲಾ ಮೂಲಕ ಆರೋಪಿಗಳು ಹಣ ವಹಿವಾಟು ನಡೆಸುತ್ತಿದ್ದರು. ಹೀಗಾಗಿ ಶಾಂತಿ ನಗರದ ಹವಾಲಾ ದಂಧೆಯಲ್ಲಿ ತೊಡಗಿರುವ ವ್ಯಕ್ತಿ ಬಗ್ಗೆ ಈ ಇಬ್ಬರಿಗೆ ಮಾಹಿತಿ ಇತ್ತು ಎಂದು ಪೊಲೀಸರು ಹೇಳಿದ್ದಾರೆ.

ಅಂತೆಯೇ ಹವಾಲಾ ಹಣ ತೆಗೆದುಕೊಂಡು ಹೋಗಲು ಬರುವವರಿಗೆ ಪೊಲೀಸರ ಸೋಗಿನಲ್ಲಿ ಬೆದರಿಸಿ ಹಣ ದೋಚಲು ಈ ಸೋದರರು ಸಂಚು ರೂಪಿಸಿದ್ದರು. ಅದರಂತೆ ಸಬ್‌ ಇನ್‌ಸ್ಪೆಕ್ಟರ್‌ನಂತೆ ಶೇಖ್‌ ಚಂಪತಿ ಲಾಲ್‌ ಪಾಷ ಖಾಕಿ ಉಡುಪು ಧರಿಸಿದ್ದರೆ, ಆತನ ಸೋದರ ಕಾನ್‌ಸ್ಟೇಬಲ್‌ ಆಗಿದ್ದ. ಮತ್ತೊಬ್ಬ ಆರೋಪಿ ಭತಲ್‌ ಕಾರು ಚಾಲಕನಾಗಿದ್ದ. ಪೂರ್ವನಿಯೋಜಿತ ಸಂಚಿನಂತೆ ದರೋಡೆಗೆ ಸಜ್ಜಾಗಿ ಆಂಧ್ರಪ್ರದೇಶದಿಂದ ಡಿ.27ರಂದು ಶಾಂತಿನಗರಕ್ಕೆ ಆರೋಪಿ ಬಂದಿದ್ದರು. ಅದೇ ವೇಳೆ ಅಡಿಕೆ ವ್ಯವಹಾರ ಹಣ ಸಂಗ್ರಹಕ್ಕೆ ತಮ್ಮ ಮಾಲಿಕರ ಸೂಚನೆ ಮೇರೆಗೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಡಕೆ ವ್ಯಾಪಾರಿ ಮೋಹನ್‌ ಅವರ ಕಾರು ಚಾಲಕ ಚಂದನ್‌ ಬಂದಿದ್ದ. ಆಗ ಶಾಂತಿನಗರದ ವ್ಯಕ್ತಿಯಿಂದ ಹಣ ಪಡೆದು ಆತ ತಮಿಳುನಾಡಿನ ಹೊಸೂರಿಗೆ ಹಣ ತಲುಪಿಸಲು ತೆರಳುತ್ತಿದ್ದ. ಆಗ ಆತನನ್ನು ಕೆ.ಎಚ್‌.ರಸ್ತೆಯಲ್ಲಿ ಅಡ್ಡಗಟ್ಟಿಆರೋಪಿಗಳು ಹಣ ದೋಚಿದ್ದರು.

ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಇನ್‌ಸ್ಪೆಕ್ಟರ್‌ ಎ.ರಾಜು ನೇತೃತ್ವದ ತಂಡ, ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮೊಬೈಲ್‌ ಕರೆಗಳ ಮಾಹಿತಿ ಮೇರೆಗೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಈ ದರೋಡೆ ಬಳಿಕ ಆಂಧ್ರಪ್ರದೇಶದಲ್ಲಿ ರಕ್ತಚಂದ್ರನ ಸಾಗಾಣಿಕೆ ಯತ್ನಿಸಿದ್ದಾಗ ಶೇಖ್‌ ಸೋದರರು ಸ್ಥಳೀಯ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದರು. ಬಳಿಕ ಅವರನ್ನು ಬಾಡಿ ವಾರೆಂಟ್‌ ಮೇರೆಗೆ ವಶಕ್ಕೆ ಪಡೆದು ದರೋಡೆ ಪ್ರಕರಣಗಳಲ್ಲಿ ಬಂಧನ ಪ್ರಕ್ರಿಯೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Darshan The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ ದರ್ಶನ್‌ ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು