ಹಾಸನದಲ್ಲೂ ಮೂರು ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ

Published : Oct 23, 2024, 06:30 AM IST
ಹಾಸನದಲ್ಲೂ ಮೂರು ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಂಧನ

ಸಾರಾಂಶ

ಕಳೆದ 3-5 ವರ್ಷಗಳಲ್ಲಿ ಬಾಂಗ್ಲಾದೇಶದಿಂದ ಸುಮಾರು 25,000 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಉಡುಪಿಯಲ್ಲಿ ಬಂಧಿತರಾದವರು ತಿಳಿಸಿದ್ದರು. ಪೊಲೀಸರ ಪ್ರಕಾರ ಕರ್ನಾಟಕದಲ್ಲಿರುವ ಒಟ್ಟು ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಒಂದು ಲಕ್ಷ ಮೀರಬಹುದು.

ಹಾಸನ(ಅ.23): ಉಡುಪಿ, ಶಿವಮೊಗ್ಗ ಬಳಿಕ ಇದೀಗ ನಕಲಿ ಆಧಾರ್‌ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. 

ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಟಲ್ ಅಕ್ಕು ಬಂಧಿತರು. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ಎಂಬುವವರಮನೆಯಲ್ಲಿ ವಾಸವಿದ್ದರು. ಜುಬೇರ್‌ನಿರ್ಮಿಸುತ್ತಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. 

ಹಾಸನ: ಮಲಗಿದ ವೇಳೆ ಕಚ್ಚಿದ ನಾಗರ ಹಾವು, ಆಟೋ ಚಾಲಕನ ಸಾವು

ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ಈ ಮೂವರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದಿದ್ದರು. ಇವರ ಬಳಿ ಇರುವ ಆಧಾರ್ ಕಾರ್ಡ್‌ಗಳು ನಕಲಿ ಎನ್ನುವುದು ಖಾತ್ರಿಯಾದ ನಂತರ ಮೂವರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪೆನ್ನನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕಳೆದ 3-5 ವರ್ಷಗಳಲ್ಲಿ ಬಾಂಗ್ಲಾದೇಶದಿಂದ ಸುಮಾರು 25,000 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಉಡುಪಿಯಲ್ಲಿ ಬಂಧಿತರಾದವರು ತಿಳಿಸಿದ್ದರು. ಪೊಲೀಸರ ಪ್ರಕಾರ ಕರ್ನಾಟಕದಲ್ಲಿರುವ ಒಟ್ಟು ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಒಂದು ಲಕ್ಷ ಮೀರಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!