ಹೈ ಪ್ರೊಫೈಲ್ ಸೆಕ್ಸ್‌ ರಾಕೆಟ್‌ನಿಂದ ನಟಿ ಪಾರು..!

Suvarna News   | Asianet News
Published : Jan 17, 2020, 02:26 PM ISTUpdated : Jan 17, 2020, 06:30 PM IST
ಹೈ ಪ್ರೊಫೈಲ್ ಸೆಕ್ಸ್‌ ರಾಕೆಟ್‌ನಿಂದ ನಟಿ ಪಾರು..!

ಸಾರಾಂಶ

ಹೈ ಪ್ರೊಫೈಲ್‌ ಸೆಕ್ಸ್ ರಾಕೆಟ್‌ನಿಂದ ಸಾವ್‌ಧಾನ್‌ ಇಂಡಿಯಾ ನಟಿ ಸೇರಿದಂತೆ ಮೂವರನ್ನು ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಅಂಧೇರಿ ಉಪನಗರದ ತ್ರೀ ಸ್ಟಾರ್‌ ಹೋಟೆಲ್‌ ಒಂದರಲ್ಲಿ ನಡೆಯುತ್ತಿದ್ದ ದಂಧೆಯನ್ನು ಮುಂಬೈ ಪೊಲೀಸರು ಬೇಧಿಸಿದ್ದು, ದಂಧೆ ನಡೆಸುತ್ತಿದ್ದ ಪ್ರಿಯಾ ಶರ್ಮಾ ಎಂಬಾಕೆಯನ್ನು ಬಂಧಿಸಿದ್ದಾರೆ.

ಮುಂಬೈ(ಜ.17): ಹೈ ಪ್ರೊಫೈಲ್‌ ಸೆಕ್ಸ್ ರಾಕೆಟ್‌ನಿಂದ ಸಾವ್‌ಧಾನ್‌ ಇಂಡಿಯಾ ನಟಿ ಸೇರಿದಂತೆ ಮೂವರನ್ನು ಮುಂಬೈ ಪೊಲೀಸರು ರಕ್ಷಿಸಿದ್ದಾರೆ. ಅಂಧೇರಿ ಉಪನಗರದ ತ್ರೀ ಸ್ಟಾರ್‌ ಹೋಟೆಲ್‌ ಒಂದರಲ್ಲಿ ನಡೆಯುತ್ತಿದ್ದ ದಂಧೆಯನ್ನು ಮುಂಬೈ ಪೊಲೀಸರು ಬೇಧಿಸಿದ್ದು, ದಂಧೆ ನಡೆಸುತ್ತಿದ್ದ ಪ್ರಿಯಾ ಶರ್ಮಾ ಎಂಬಾಕೆಯನ್ನು ಬಂಧಿಸಿದ್ದಾರೆ.

ಸಿಟಿ ಪೊಲೀಸ್‌ ವಿಭಾಗದ ಸೋಷಿಯಲ್ ಸರ್ವೀಸ್‌ ಬ್ರಾಂಚ್‌ ಗುರುವಾರ ಅಂಧೇರಿಯಲ್ಲಿರುವ ತ್ರೀ ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆಸಿದ್ದರು. ಹೈ ಪ್ರೊಫೈಲ್ ಸೆಕ್ಸ್‌ ರಾಕೆಟ್‌ ಜಾಲವನ್ನು ಮಂಬೈ ಪೊಲೀಸರು ಬೇಧಿಸಿದ್ದಾರೆ. ದಂಧೆ ನಡೆಸುತ್ತಿದ್ದ 29 ವರ್ಷದ ಮಹಿಳೆ ಪ್ರಿಯಾ ಎಂಬಾಕೆಯನ್ನು ಅರೆಸ್ಟ್ ಮಾಡಲಾಗಿದೆ. ಜಾಲದಲ್ಲಿ ಸಿಕ್ಕಿಹಾಕಿಕೊಂಡಿದ್ದ ಒಬ್ಬ ಅಪ್ರಾಪ್ತೆ ಸೇರಿದಂತೆ ಮೂವರು ಮಹಿಳಾ ನಟಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ತೇಜಸ್ವಿ- ಸೂಲಿಬೆಲೆ ಹತ್ಯೆಗೆ ಸ್ಕೆಚ್: ಗೋ ಮಧುಸೂದನ್ ಪ್ರತಿಕ್ರಿಯೆಯಿದು!

ರೈಡ್‌ ನಡೆಸಿದ ಬ್ರಾಂಚ್‌ನ ಹಿರಿಯ ಪೊಲೀಸ್ ಅಧಿಕಾರಿ ಸಂದೇಶ್ ರೆವಲೆ ಘಟನೆ ಬಗ್ಗೆ ಮಾಹಿತಿ ನೀಡಿ, ದಾಳಿ ನಡೆಸಿದ ಸಂದರ್ಭ ಅಪ್ರಾಪ್ತೆ ಸೇರಿ ಮೂವರು ನಟಿಯರನ್ನು ವ್ಯಭಿಚಾರಕ್ಕೆ ಬಳಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಅವರನ್ನು ರಕ್ಷಿಸಿ ಸೆಕ್ಸ್‌ ರಾಕೆಟ್‌ ನಡೆಸುತ್ತಿದ್ದ ಮಹಿಳೆ ಪ್ರಿಯಾ ಶರ್ಮಾಳನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಶರ್ಮಾ ಅವರು ಕಂಡೀವಲಿಯಲ್ಲಿ ಟೂರ್ಸ್ & ಟ್ರಾವೆಲ್ಸ್‌ ನಡೆಸುತ್ತಿದ್ದರು. ಹಾಗೆಯೇ ಅನೈತಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಂಡಿದ್ದರು ಎಂದು ಅವರು ತಿಳಿಸಿದ್ದಾರೆ. ಸೆಕ್ಸ್‌ ರಾಕೆಟ್‌ನಿಂದ ರಕ್ಷಿಸಲಾದ ಒಬ್ಬ ಯುವತಿ ಸಾವ್‌ಧಾನ್‌ ಇಂಡಿಯಾ ಕ್ರೈಂ ಶೋನಲ್ಲಿ ನಟಿಸಿದ್ದರು. ಇನ್ನೊಬ್ಬಾಕೆ ಮರಾಠಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ. ಅಪ್ರಾಪ್ತೆ ವೆಬ್‌ ಸಿರೀಸ್‌ಗಳಲ್ಲಿ ನಟಿಸುತ್ತಿದ್ದರು.

ಸಿಎಎ ಪರ ಪ್ರತಿಭಟನೆ: ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸ್ಕೆಚ್!
ಜನವರಿ 17ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?