
ಸೊರಬ/ಲೋಕಾಪುರ(ಆ.11): ರಾಜ್ಯದಲ್ಲಿ ಮೂರು ಪ್ರತ್ಯೇಕ ಘಟನೆಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಬ್ಬರು ಸೇರಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರವಷ್ಟೇ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷಿತ ಅಂಕ ಬಂದಿಲ್ಲ ಎಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹವಲ್ದಾರ್ಬೆಟ್ಟುವಿನ ವಿದ್ಯಾರ್ಥಿ ಅಗ್ನೀಶ್ ಕುಮಾರ್ (16) ಹಾಗೂ ಬಾಗಲಕೋಟೆಯ ಮುಧೋಳ ತಾಲೂಕಿನ ಲೋಕಾಪುರದ ವಿದ್ಯಾರ್ಥಿನಿ ಐಶ್ವರ್ಯ ಶಂಕರ ಬಾರಕೇರ (16) ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
3 ವರ್ಷದಲ್ಲಿ 24,000 ಮಕ್ಕಳ ಆತ್ಮಹತ್ಯೆ!
ಇನ್ನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಕೆ. ಚಿನ್ಮಯ್ (19) ಸಿಇಟಿಯಲ್ಲಿ ಉತ್ತಮ ಅಂಕ ಲಭಿಸದೆ ಸರ್ಕಾರಿ ಕೋಟಾದಲ್ಲಿ ಬಿಇ ಪ್ರವೇಶ ದೊರೆಯುವುದು ಕಷ್ಟ ಎಂಬ ಆತಂಕದಿಂದ ಮನೆಯ ಹಿಂಬದಿಯ ಮರಕ್ಕೆ ನೇಣು ಬಿಗಿದು ಮೃತಪಟ್ಟಿದ್ದಾನೆ. ಈ ಸಂಬಂಧ ಸ್ಥಳೀಯ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ