ಚನ್ನರಾಯಪಟ್ಟಣ: ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಕಾರಣ?

Published : Aug 16, 2024, 04:51 AM IST
ಚನ್ನರಾಯಪಟ್ಟಣ: ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಕಾರಣ?

ಸಾರಾಂಶ

ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಿವಿಧೆಡೆ ಸಾಲ ಪಡೆದಿದ್ದ ಶ್ರೀನಿವಾಸ್‌ ಸಾಲವನ್ನು ಮರುಪಾವತಿಸಲಾಗದೆ ಪರಿತಪಿಸುತ್ತಿದ್ದರು. ಕಳೆದ ಮಂಗಳವಾರದಿಂದ ಕಾಣೆಯಾಗಿದ್ದ ಈ ಮೂವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಅವರ ಸುಳಿವು ದೊರೆಯದಿದ್ದಾಗ ಚನ್ನರಾಯಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದರು. 

ಚನ್ನರಾಯಪಟ್ಟಣ(ಆ.16):  ಸಾಲಬಾಧೆ ತಾಳಲಾರದೆ ಹೇಮಾವತಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚನ್ನರಾಯಪಟ್ಟಣದ ಕೆರೆಬೀದಿಯಲ್ಲಿ ಬುಧವಾರ ನಡೆದಿದೆ. ಶ್ರೀನಿವಾಸ್ (43), ಶ್ವೇತಾ (36) ಮತ್ತು ನಾಗಶ್ರೀ (13) ಮೃತ ವ್ಯಕ್ತಿಗಳು. 

ಶ್ರೀನಿವಾಸ್ ಕಾರು ಚಾಲಕನಾಗಿದ್ದು, ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ವಿವಿಧೆಡೆ ಸಾಲ ಪಡೆದಿದ್ದ ಶ್ರೀನಿವಾಸ್‌ ಸಾಲವನ್ನು ಮರುಪಾವತಿಸಲಾಗದೆ ಪರಿತಪಿಸುತ್ತಿದ್ದರು. ಕಳೆದ ಮಂಗಳವಾರದಿಂದ ಕಾಣೆಯಾಗಿದ್ದ ಈ ಮೂವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಅವರ ಸುಳಿವು ದೊರೆಯದಿದ್ದಾಗ ಚನ್ನರಾಯಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದರು. 

ರಾಮನಗರ: ಪ್ರೀತಿಗೆ ಪೋಷಕರ ವಿರೋಧ, ಯುವಕ ನೇಣಿಗೆ ಶರಣು, ಚಾಕು ಇರಿದುಕೊಂಡ ಯುವತಿ

ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ದಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು 2 ಶವ ಹೊರ ತೆಗೆದಿದ್ದಾರೆ. ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ