
ಬಾಗಲಕೋಟೆ(ಆ.29): ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡ್ತಿದ್ದ ಖರ್ತನಾಕ್ ಗ್ಯಾಂಗ್ನ ಕಳ್ಳಿಯರನ್ನ ಬಾಗಲಕೋಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಮೂಲದ ರೋಶನಿ ಚೌಗಲೆ, ರೇಣುಕಾ ವರಗಂಡೆ, ಸವಿತಾ ಲೋಂಡೆ ಬಂಧಿತ ಕಳ್ಳಿಯರು.
ಬಂಧಿತ ಕಳ್ಳಿಯರು ಬಸ್ ನಿಲ್ದಾಣದಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದರಂತೆ. ಬಸ್ ಹತ್ತುವಾಗ ಉಂಟಾಗುವ ರಶ್ ಸಮಯದಲ್ಲಿ ಖತರ್ನಾಕ್ ಗ್ಯಾಂಗ್ ಚಿನ್ನ ಎಗರಿಸುತ್ತಿತ್ತು. ಬಂಧಿತರಿಂದ 6 ಲಕ್ಷ ಮೌಲ್ಯದ 91.98 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ.
ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ; 24 ಗಂಟೆಯೊಳಗೆ ಬಂಧಿಸಿದ ಮಣಿಪಾಲ ಪೊಲೀಸರು!
ಬಾಗಲಕೋಟೆ ಶಹರ ಪೊಲೀಸರು ಕಾರ್ಯಾಚರಣೆ ನಡೆಸುವ ಮೂಲಕ ಕಳ್ಳಿಯರನ್ನ ಬಂಧಿಸಿದ್ದಾರೆ. ಬಾಗಲಕೋಟೆಯ ಭಾರತಿ ಹಿರೇಮಠ ದೂರು ಆಧರಿಸಿ ಕಳ್ಳಿಯರನ್ನ ಬಂಧಿಸಲಾಗಿದೆ. ಭಾರತಿ ಅವರ 11 ಗ್ರಾಂ ಚಿನ್ನಾಭರಣ ಕಳುವಾಗಿತ್ತು. ಈ ಬಗ್ಗೆ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರು. ಆಗಸ್ಟ್ 19 ರಂದು ಕಳ್ಳತನ ನಡೆದಿತ್ತು. ಒಟ್ಟು 6.60 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ