ಜಾಲಿರೈಡ್ ಹೋಗಿದ್ದ ಮೂವರು ಯುವಕರ ದುರಂತ ಸಾವು

Published : Dec 20, 2020, 06:03 PM IST
ಜಾಲಿರೈಡ್ ಹೋಗಿದ್ದ ಮೂವರು ಯುವಕರ ದುರಂತ ಸಾವು

ಸಾರಾಂಶ

ಜಾಲಿ ರೈಡ್‌ಗೆ ಹೋಗಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.   ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, (ಡಿ.20): ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ.

ಹೊಸಕೋಟೆಯ ನಿವಾಸಿಗಳಾದ ರಾಜೇಶ್(21), ಲವನಿತ್ (22) ಹಾಗೂ ಹರೀಶ್ (21) ಮೃತಪಟ್ಟ ಯುವಕರು.

ಸಣ್ಣ ಪುಟ್ಟ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಮೂವರು ರಾತ್ರಿ 12.30ರವರೆಗೆ ಪಾರ್ಟಿ ಮಾಡಿ, ಕಂಠಪೂರ್ತಿ ಕುಡಿದು ಹೊಂಡಾ ಅಕ್ಟೀವಾ ಸ್ಕೂಟರ್ ನಲ್ಲಿ ಜಾಲಿರೈಡ್ ಹೋಗಿದ್ದರು.

ತನ್ನ ಹೆತ್ತಮ್ಮನ ಸಾವಿನ ರಹಸ್ಯವನ್ನು ಬಿಚ್ಚಿಟ್ಟ 8 ವರ್ಷದ ಮಗ..!

ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಯುವಕರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕಣ ದಾಖಲಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಘಾನಾ ಪ್ರವಾದಿಯ ಅಸಲಿ ಮುಖ ಬಯಲು: ಪ್ರವಾಹ ಆಗುತ್ತೆ ಅಂತ ಜನರ ದಾರಿ ತಪ್ಪಿಸಿದ ಪ್ರವಾದಿಯ ಬಂಧನ
ಮಕ್ಕಳು ನಿಮ್ಮ ಕನಸುಗಳನ್ನು ನನಸು ಮಾಡುವ ಯಂತ್ರಗಳಲ್ಲ: ಮಕ್ಕಳಿಗೆ ಕೊಡಿ ಬೊಗಸೆಯಷ್ಟಾದರೂ ಪ್ರೀತಿ!