ಟಿಪ್ಪರ್-ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ, ಯುವತಿಗೆ ಗಂಭೀರ ಗಾಯ

Published : Jul 04, 2024, 11:44 PM IST
ಟಿಪ್ಪರ್-ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ, ಯುವತಿಗೆ ಗಂಭೀರ ಗಾಯ

ಸಾರಾಂಶ

ಟಿಪ್ಪರ್ ಲಾರಿ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರಿನ ಜೊಳದಾಳು ಬಳಿ ನಡೆದಿದೆ. ಚೇತನ್ ಕುಮಾರ್ ನಾಯ್ಕ್(26), ಮೃತ ದುರ್ದೈವಿ.

ಚಿಕ್ಕಮಗಳೂರು (ಜು.4): ಟಿಪ್ಪರ್ ಲಾರಿ-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರಿನ ಜೊಳದಾಳು ಬಳಿ ನಡೆದಿದೆ.

ಚೇತನ್ ಕುಮಾರ್ ನಾಯ್ಕ್(26), ಮೃತ ದುರ್ದೈವಿ. ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೆರೀಕೆರೆ ತಾಲೂಕಿನ ಹೊಸಳ್ಳಿ ತಾಂಡ್ಯದ ನಿವಾಸಿಯಾಗಿರುವ ಮೃತ ಚೇತನ್, ಕೆಂಚಾಪುರ ತಾಂಡ್ಯದ ನಿವಾಸಿಯಾಗಿರುವ ಗಾಯಾಳು ಮೇಘ(24) ಬೈಕ್‌ ಮೇಲೆ ಹೋಗುತ್ತಿರುವಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ. ಈ ವೇಳೆ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ದುರ್ಮರಣಕ್ಕೀಡಾದ ಯುವಕ. ಅದೃಷ್ಟವಶಾತ್ ಯುವತಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೊಣಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ರಾಯಚೂರು: ಸಾಲಬಾಧೆಗೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ!

ಘಟನೆ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ