
ಬೆಂಗಳೂರು/ ಮಂಗಳೂರು(ಫೆ. 26) ಮಂಗಳೂರು-ಚೆನ್ನೈ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸ್ಫೋಟಕ ಪತ್ತೆಯಾಗಿದೆ. ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್ಪ್ರೆಸ್ ರೈಲಿನಲ್ಲಿ ಸ್ಫೋಟಕ ಪತ್ತೆಯಾಗಿದೆ.
ತಮಿಳುನಾಡು ಮೂಲದ ಮಹಿಳೆ ರಮಣಿ ಎಂಬಾಕೆಯನ್ನು ಬಂಧಿಸಲಾಗಿದೆ. ನೂರು ಜಿಲೆಟಿನ್ ಕಡ್ಡಿಗಳು ಮತ್ತು 350 ಡಿಟೋನೇಟರ್ ಸಾಗಿಸುತ್ತಿದ್ದ ರಮಣಿ ಸಿಕ್ಕಿಬಿದ್ದಿದ್ದಾಳೆ.
ಕೇರಳದ ಕೋಝಿಕೋಡ್ ರೈಲು ನಿಲ್ದಾಣದಲ್ಲಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಲಕ್ಕಾಡ್ ವಿಭಾಗದ ರೈಲ್ವೇ ಭದ್ರತಾ ವಿಭಾಗ(ಆರ್ ಪಿಎಫ್) ನಿಂದ ಮಹಿಳೆಯನ್ನು ಬಂಧಿಸಲಾಗಿದೆ.
ಶಿವಮೊಗ್ಗ; ಕಾರ್ಮಿಕರ ದುರಂತ ಅಂತ್ಯಕ್ಕೆ ಕಾರಣ ಏನು?
ಕೇರಳದ ತಲಷ್ಯೇರಿಗೆ ಸ್ಫೋಟಕ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೇರಳ ಇಂಟಲಿಜೆನ್ಸ್ ವಿಭಾಗ ತನಿಖೆ ಮುಂದುವರಿಸಿದೆ. ರೈಲು ಮಂಗಳೂರು ತಲುಪುವ ಮೊದಲೇ ಕೇರಳ ಪೊಲೀಸರಿಂದ ಮಹಿಳೆ ಬಂಧನವಾಗಿದೆ.
ರೈಲಿನ ಸೀಟಿನಡಿಯಲ್ಲಿ ಇಟ್ಟು ಸಾಗಿಸುತ್ತಿದ್ದರು. ಬ್ಯಾಗ್ನಲ್ಲಿ ಈ ಸ್ಫೋಟಕಗಳನ್ನು ಹಾಕಿ ಸೀಟ್ ಕೆಳಗಡೆ ಇಟ್ಟಿದ್ದರು, ಅನುಮಾನದ ಮೇರೆಗೆ ತಪಾಸಣೆ ನಡೆಸಿದಾಗ ಸ್ಫೋಟಕ ಇರುವುದು ಪತ್ತೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ