8 ವಾರ್ ರೂಂಗಳಿಂದ ಮಹತ್ವದ ಡೇಟಾ ವಶಕ್ಕೆ, ಸಂದೀಪ್ ಪಾಟೀಲ್ ಮಾಹಿತಿ

Published : May 06, 2021, 05:29 PM ISTUpdated : May 06, 2021, 05:45 PM IST
8 ವಾರ್ ರೂಂಗಳಿಂದ ಮಹತ್ವದ ಡೇಟಾ ವಶಕ್ಕೆ, ಸಂದೀಪ್ ಪಾಟೀಲ್ ಮಾಹಿತಿ

ಸಾರಾಂಶ

ಎಂಟು ವಾರ್ ರೂಮ್ ಗಳ ಮೇಲೆ ಸಿಸಿಬಿ ದಾಳಿ ಪ್ರಕರಣ/ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ/ ಸಾಕಷ್ಟು ಪ್ರಮಾಣದ ಡೇಟಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ/ ಯಾವ ಯಾವ ಆಸ್ಪತ್ರೆಗಳು ದಂಧೆಯಲ್ಲಿ ಭಾಗಿಯಾಗಿದ್ದವು/ ಎಂಬುದರ ಬಗ್ಗೆ ತನಿಖೆ ಮುಂದುವರೆಸಲಾಗಿದೆ. 

ಬೆಂಗಳೂರು(ಮೇ. 06) ಬೆಡ್ ಬುಕಿಂಗ್ ದಂಧೆ ಬಹಿರಂಗವಾದ ನಂತರ ಎಂಟು ವಾರ್ ರೂಮ್ ಗಳ ಮೇಲೆ ಸಿಸಿಬಿ ದಾಳಿ  ಮಾಡಿದ್ದು ಸಾಕಷ್ಟು ಪ್ರಮಾಣದ ಡೇಟಾವನ್ನು ವಶಕ್ಕೆ ಪಡೆಯಲಾಗಿದೆ ಎಂದು  ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಯಾವ ಯಾವ ಆಸ್ಪತ್ರೆಗಳು ದಂಧೆಯಲ್ಲಿ ಭಾಗಿಯಾಗಿದ್ದವು ಎಂಬುದರ ಬಗ್ಗೆ ತನಿಖೆ ಮುಂದುವರೆಸಲಾಗಿದೆ.  ಸದ್ಯಕ್ಕೆ ನಾಲ್ಕು ಆಸ್ಪತ್ರೆಗಳು ನಗರದಲ್ಲಿ ದಂಧೆಯಲ್ಲಿ ಭಾಗಿಯಾಗಿರುವುದು ನಮ್ಮ ತನಿಖೆಯಲ್ಲಿ ಬೆಳಕಿಗೆ  ಬಂದಿದೆ. ನಾಲ್ಕು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಯಾವ ಆಸ್ಪತ್ರೆಯಲ್ಲಿ ಬ್ಲಾಕ್ ಮಾಡಿದ್ರು ಎಂಬುದರ ಬಗ್ಗೆ ತನಿಖೆ  ನಡೆಯುತ್ತಿದ್ದು  ನಮ್ಮ ಸಿಸಿಬಿ ಅಧಿಕಾರಿಗಳು ಕೆಲ ಆಸ್ಪತ್ರೆಗಳಿಗೆ ಹೋಗಿ ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡರೊಂದಿಗೆ ಬೆಂಗಳೂರು ಬೆಡ್ ಬ್ಲಾಕಿಂಗ್ ದಂಧೆಕೋರ್ತಿ

ತನಿಖೆಗಾಗಿ ಎಂಟು ತಂಡಗಳನ್ನು ರಚನೆ ಮಾಡಲಾಗಿದೆ. ಒಂದು ತಂಡದಲ್ಲಿ ಒಬ್ಬ ಇನ್ಸ್ಪೆಕ್ಟರ್ ಅಧಿಕಾರಿ ತಂಡದ ನೇತೃತ್ವ ವಹಿಸಲಿದ್ದಾರೆ. ಎಂಟು ತಂಡಗಳು ಎಂಟು ವಾರ್ ಗಳ ಮೇಲೆ ದಾಖಲೆ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ವಾರ್ ರೂಂ ನಿಂದಲೇ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದ್ದು ನಾಗರಿಕರು ಪರಿತಪಿಸಬೇಕಾಗಿದೆ ಎಂಬ ಆತಂಕಾರಿ ಮಾಹಿತಿಯನ್ನು ಸಂಸದ ತೇಜಸ್ವಿ ಸೂರ್ಯ ದಾಖಲೆ ಸಮೇತ ಅನಾವರಣ ಮಾಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?