ಚಾರ್ಮಾಡಿ ಘಾಟ್ ಎಂಟ್ರಿಯಲ್ಲಿ ಪ್ರವಾಸಿಗರ ರಂಪಾಟ, ಎಣ್ಣೆ ಮತ್ತಿನಲ್ಲಿ ಪೊಲೀಸರ ಮುಂದೆಯೇ ಹೊಡೆದಾಟ!

Published : Jul 13, 2024, 09:37 PM IST
ಚಾರ್ಮಾಡಿ ಘಾಟ್ ಎಂಟ್ರಿಯಲ್ಲಿ ಪ್ರವಾಸಿಗರ ರಂಪಾಟ, ಎಣ್ಣೆ ಮತ್ತಿನಲ್ಲಿ ಪೊಲೀಸರ ಮುಂದೆಯೇ ಹೊಡೆದಾಟ!

ಸಾರಾಂಶ

ಕಾಫಿನಾಡಿನಲ್ಲಿ ಪ್ರವಾಸಿಗರ ರಂಪಾಟ ಮುಂದುವರಿದೆ. ಕುಡಿದ ಅಮಲಿನಲ್ಲಿ ಯುವಕರು ಚಾರ್ಮಾಡಿ ಘಾಟ್ ಎಂಟ್ರಿಯಲ್ಲಿ ಕಿರಿಕ್ ಮಾಡಿದ್ದಾರೆ.

ಚಿಕ್ಕಮಗಳೂರು (ಜು.13): ಕಾಫಿನಾಡಿನಲ್ಲಿ ಪ್ರವಾಸಿಗರ ರಂಪಾಟ ಮುಂದುವರಿದೆ. ಕುಡಿದ ಅಮಲಿನಲ್ಲಿ ಯುವಕರು ಚಾರ್ಮಾಡಿ ಘಾಟ್ ಎಂಟ್ರಿಯಲ್ಲಿ ಕಿರಿಕ್ ಮಾಡಿದ್ದಾರೆ.

ಐ20 ಕಾರೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಆಗ ಕಿರಿಕ್ ಆರಂಭವಾಗಿದೆ. ಮಂಗಳೂರು ಮೂಲದ ಯುವಕರು ಐ20 ಕಾರಿನಲ್ಲಿದ್ದರು. ಇವರು ಐ 20 ಕಾರ್ ನಲ್ಲಿ ಮಂಗಳೂರಿನಿಂದ ಮೂಡಿಗೆರೆಗೆ ಪ್ರವಾಸ ಕೈಗೊಂಡಿದ್ದರು.

ಕುಡಿದ ಅಮಲಿನಲ್ಲಿ ಯುವಕರು ಅಲ್ಲೇ ನಿಂತಿದ್ದ ಹೊಂಡಾ ಸಿವಿಕ್ ಕಾರಿಗೆ ತಮ್ಮ ಐ20 ಕಾರಿನಿಂದ ಬಂದು ಗುದ್ದಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದ್ದ ಸ್ಥಳೀಯರ ಮೇಲೆ ಹಲ್ಲೆ ಮಾಡಿದ್ದಾರೆ. ಕಾರಿನಲ್ಲಿ ಒಟ್ಟು ಐವರು ಯುವಕರು ಇದ್ದರು. 

ಪೊಲೀಸರ ಸಮ್ಮುಖದಲ್ಲಿ ಹೊಡೆದಾಟ ಬಡಿದಾಟ  ಮಾಡಿಕೊಂಡಿದ್ದು, ಸಮಾಜ ಸೇವಕ  ಬಣಕಲ್ ಆರೀಫ್ ಮೇಲೂ ಯುವಕರು ಕೈ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ  ಕೊಟ್ಟಿಗೆಹಾರದ ಮೊರಾರ್ಜಿ ದೇಸಾಯಿ ಶಾಲೆ ಬಳಿ ಘಟನೆ ನಡೆದಿದೆ.

ಚಾರ್ಮಾಡಿಯ ಅಪಾಯಕಾರಿ ತೊರೆಗೆ ಇಳಿದಿದ್ದವರ ಬಟ್ಟೆ ಹೊತ್ತೊಯ್ದ ಪೊಲೀಸ್ರು!
ತುಂಬಿ ಹರಿಯುತ್ತಿದ್ದ ಅಪಾಯಕಾರಿ ತೊರೆಯೊಂದಕ್ಕೆ ಇಳಿದು ಸ್ನಾನ ಮಾಡುತ್ತಿದ್ದವರ ಬಟ್ಟೆಗಳನ್ನು ಪೊಲೀಸರು ಹೊತ್ತೊಯ್ದು ಬುದ್ಧಿ ಕಲಿಸಿದ ಘಟನೆ ಮಂಗಳವಾರ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಪೋಲಿಸರ ಈ ನಡೆ ಸಾರ್ವಜನಿಕರ ಪ್ರಶಂಸೆಗೊಳಗಾಗಿದೆ. ಅಪಾಯಕಾರಿ ತೊರೆಯೊಂದಕ್ಕೆ ಇಳಿದು ಸ್ನಾನ ಮಾಡುತ್ತಾ ಕಲ್ಲು ಬಂಡೆ ಏರುತ್ತಿದ್ದ ತಂಡವನ್ನು ಗಮನಿಸಿದ ಚಿಕ್ಕಮಗಳೂರು ವಿಭಾಗದ ಪೊಲೀಸ್ ಪ್ಯಾಟ್ರೋಲ್‌ ಸಿಬ್ಬಂದಿ ಯುವಕರ ಬಟ್ಟೆಗಳನ್ನು ಹೊತ್ತೊಯ್ದು ತಮ್ಮ ವಾಹನದಲ್ಲಿ ಇರಿಸಿ ತಂಡವನ್ನು ಪೇಚಿಗೆ ಸಿಲುಕಿಸಿದರು. ಈ ವೇಳೆ ಯುವಕರು ಪೊಲೀಸರ ಜತೆ ವಾಗ್ವಾದ ನಡೆಸಿದ್ದು, ಇದಕ್ಕೆ ಬಗ್ಗದ ಪೊಲೀಸರು ಯುವಕರನ್ನು ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಯುವಕರಿಗೆ ತಮ್ಮ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿ ಬಟ್ಟೆಗಳನ್ನು ಕೊಡುವಂತೆ ಅಂಗಲಾಚಿದರು. ಪೊಲೀಸರು ಸಾಕಷ್ಟು ಬುದ್ಧಿವಾದ ಮತ್ತು ಅಪಾಯದ ಕುರಿತು ವಿವರಿಸಿ ಎಚ್ಚರಿಕೆ ನೀಡಿ ನಂತರ ಬಟ್ಟೆಗಳನ್ನು ಹಿಂತಿರುಗಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!