ಮನೆಯ ಛಾವಣಿ ಕುಸಿದು ಮಕ್ಕಳಿಬ್ಬರು ದಾರುಣ ಸಾವು!

Published : May 31, 2024, 04:00 PM ISTUpdated : May 31, 2024, 04:10 PM IST
ಮನೆಯ ಛಾವಣಿ ಕುಸಿದು ಮಕ್ಕಳಿಬ್ಬರು ದಾರುಣ ಸಾವು!

ಸಾರಾಂಶ

ಮನೆಯ ಮೇಲ್ಛಾವಣಿ ಕುಸಿದು ಆಟವಾಡುತ್ತಿದ್ದ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಕಂದಗಲ್ ಗ್ರಾಮದಲ್ಲಿ ನಡೆದಿದೆ. ಗೀತಾ ಈಶ್ವರಯ್ಯ ಆದಾಪೂರಮಠ (12), ರುದ್ರಯ್ಯ ಈಶ್ವರಯ್ಯ ಆದಾಪೂರಮಠ (10) ಮೃತ ದುರ್ದೈವಿಗಳು

ಬಾಗಲಕೋಟೆ (ಮೇ.31): ಮನೆಯ ಮೇಲ್ಛಾವಣಿ ಕುಸಿದು ಆಟವಾಡುತ್ತಿದ್ದ ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಕಂದಗಲ್ ಗ್ರಾಮದಲ್ಲಿ ನಡೆದಿದೆ.

ಗೀತಾ ಈಶ್ವರಯ್ಯ ಆದಾಪೂರಮಠ (12), ರುದ್ರಯ್ಯ ಈಶ್ವರಯ್ಯ ಆದಾಪೂರಮಠ (10) ಮೃತ ದುರ್ದೈವಿಗಳು. ಮನೆ ತುಂಬಾ ಹಳೆಯದಾಗಿದೆ. ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಮಕ್ಕಳು ಇಂದು ಮನೆಯಲ್ಲಿ ಆಟವಾಡುವಾಗ ಏಕಾಏಕಿ ಕುಸಿದುಬಿದ್ದ ಮೇಲ್ಛಾವಣಿ. ತಪ್ಪಿಸಿಕೊಳ್ಳಲಾಗದೆ ಮಣ್ಣಿನಡಿ ಬಿದ್ದ ಮಕ್ಕಳು. ಮನೆ ಬೀಳುತ್ತಿದ್ದ ಓಡಿಬಂದ ಪೋಷಕರು ಸ್ಥಳೀಯರು. ಆದರೆ ಮಕ್ಕಳ ಮಣ್ಣಿನಡಿ ಸಿಲುಕಿ ಹೊರಬರಲಾಗದೇ ಮೃತಪಟ್ಟಿವೆ. ಗ್ರಾಮಸ್ಥರು ಮಣ್ಣಿನಡಿ ಸಿಲುಕಿದ ಮಕ್ಕಳನ್ನು ಹೊರತೆಗೆದು ಇಳಕಲ್ ಆಸ್ಪತ್ರೆಗೆ ಮಕ್ಕಳ ಶವ ರವಾನಿಸಲಾಗಿದರು. ಸ್ಥಳದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲುಮುಟ್ಟಿದೆ. ನಾಳೆಯಿಂದ ಶಾಲೆಗೆ ಹೋಗಬೇಕಿದ್ದ ಮಕ್ಕಳು. 

 

ವಿವಾಹಿತ ಪ್ರಿಯತಮೆ ಬಾಗಿಲು ತೆರೆಯದ್ದಕ್ಕೆ ಆ್ಯಸಿಡ್ ಎರಚಿದ ಕಿರಾತಕ!

ಘಟನೆ ಮಾಹಿತಿ ತಿಳಿದು ಇಳಕಲ್ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಳಕಲ್ ಸರ್ಕಾರಿ ಆಸ್ಪತ್ರೆಗೆ ಶಾಸಕ ವಿಜಯಾನಂದ ಕಾಶೆಪ್ಪನವರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಳಕಲ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು