
ಗದಗ (ಸೆ.18): ಕಾರು ಒಂದು ನಿಯಂತ್ರಣ ತಪ್ಪಿ ಡಿವೈಡರ್ ಆಚೆಗೆ ಚಲಿಸುತ್ತಿದ್ದ ಗೋವಾ ಸಾರಿಗೆ ಬಸ್ಗೆ ಡಿಕ್ಕಿಯಾಗಿ ಮೂವರು ದುರ್ಮರಣಕ್ಕೀಡಾದ ಘಟನೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ವೇಳೆ ಕಾರಿನಲ್ಲಿದ್ದ ಅರ್ಜುನ್ ನೆಲ್ಲೂರು (29), ರವಿ ನೆಲ್ಲೂರು (40) ಮತ್ತು ಈರಣ್ಣ ಉಪ್ಪಾರ (32) ಮೃತಪಟ್ಟಿದ್ದಾರೆ. ಕೊಪ್ಪಳದಿಂದ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು. ಮಾರ್ಗಮಧ್ಯೆ ನಿಯಂತ್ರಣ ತಪ್ಪಿ ಡಿವೈಡರ್ ಆಚೆಗೆ ಚಲಿಸುತ್ತಿದ್ದ ಪಣಜಿಯಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಗೋವಾ ಸಾರಿಗೆ ಬಸ್ಗೆ ಡಿಕ್ಕಿಯಾಗಿದೆ. ಗೋವಾ ಸಾರಿಗೆ ಬಸ್ಗೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಕಲಬುರಗಿ: ಕನ್ನಡ ತೆಗೆದು ಉರ್ದು ನಾಮಫಲಕ ಹಾಕಿದ್ದನ್ನ ಖಂಡಿಸಿ ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಕರವೇ
ಅರ್ಜುನ್ ಮತ್ತು ಈರಣ್ಣ ಇಬ್ಬರು ಪೊಲೀಸ್ ಇಲಾಖೆಯ ವೈರ್ಲೆಸ್ ವಿಭಾಗದ ಸಿಬ್ಬಂದಿಯಾಗಿದ್ದರು. ಅರ್ಜುನ್ ಮತ್ತು ರವಿ, ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಹುನಗುಂದ ಗ್ರಾಮದ ನಿವಾಸಿಗಳು. ಈರಣ್ಣ ಉಪ್ಪಾರ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ನಿವಾಸಿಯಾಗಿದ್ದ. ಈ ಪ್ರಕರಣ ಗದಗ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ