ಪತ್ನಿಯ ಚಿತಾಭಸ್ಮ ವಿಸರ್ಜಿಸಲು ಹೋದ ಪತಿಯೂ ನೀರಿನಲ್ಲಿ ಮುಳುಗಿ ಸಾವು!

Published : Sep 18, 2025, 06:50 PM IST
Tragic Drowning in Bahraich

ಸಾರಾಂಶ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ, ಪತ್ನಿಯ ಚಿತಾಭಸ್ಮ ವಿಸರ್ಜಿಸಲು ನದಿಗೆ ತೆರಳಿದ್ದ ಪತಿ ಸೇರಿದಂತೆ ಮೂವರು ದೋಣಿ ಮಗುಚಿ ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆಯು ಪ್ರವಾಹ ಪೀಡಿತ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳ ಕೊರತೆಯನ್ನು ಎತ್ತಿ ತೋರಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Husband drowns to death after going to bury wife's ashes!: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕೈಸರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಂದಿಪುರ ಗ್ರಾಮದಲ್ಲಿ ಸೆಪ್ಟೆಂಬರ್ 17, 2025 ರಂದು (ಬುಧವಾರ) ಒಂದು ದಾರುಣ ಘಟನೆ ಸಂಭವಿಸಿದೆ. ಪತ್ನಿಯ ಚಿತಾಭಸ್ಮವನ್ನು ವಿಸರ್ಜಿಸಲು ನದಿಗೆ ತೆರಳಿದ್ದ ಪತಿ ಸೇರಿದಂತೆ ಮೂವರು ಆಳವಾದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ನಿಂದಿಪುರ ಗ್ರಾಮದ ದುರಂತ ಸಂಭವಿಸಿದ್ದು ಹೇಗೆ?

ಸ್ಥಳೀಯ ಪೊಲೀಸರ ಮಾಹಿತಿಯಂತೆ, ನಿಂದಿಪುರ ಗ್ರಾಮದ ವ್ಯಕ್ತಿಯೊಬ್ಬರು ಇತ್ತೀಚೆಗೆ ತಮ್ಮ ಪತ್ನಿಯನ್ನು ಕಳೆದುಕೊಂಡಿದ್ದರು. ಆಕೆಯ ಚಿತಾಭಸ್ಮವನ್ನು ವಿಸರ್ಜಿಸಲು ಬುಧವಾರ ಬೆಳಿಗ್ಗೆ ಆತ, ಇತರ ಇಬ್ಬರು ಪರಿಚಿತರೊಂದಿಗೆ ದೋಣಿಯಲ್ಲಿ ನದಿಗೆ ತೆರಳಿದ್ದರು. ಚಿತಾಭಸ್ಮವನ್ನು ಮುಳುಗಿಸುವ ವೇಳೆ, ದೋಣಿ ಇದ್ದಕ್ಕಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡಿತು. ಇದರಿಂದಾಗಿ ದೋಣಿಯಲ್ಲಿದ್ದ ಮೂವರು ಆಳವಾದ ನೀರಿಗೆ ಬಿದ್ದರು. ರಭಸ ನೀರಿನ ಹರಿವು, ಪ್ರವಾಹದಿಂದಾಗಿ ಅವರಿಗೆ ಹೊರಬರಲು ಸಾಧ್ಯವಾಗದೇ ದುರಂತ ಸಾವನ್ನಪ್ಪಿದರು.

ಇದನ್ನೂ ಓದಿ: ಕೇಳಿದಷ್ಟು ವರದಕ್ಷಿಣೆ ಕೊಡದ್ದಕ್ಕೆ ಗಂಡನ ಮನೆಯವರೆಲ್ಲ ಸೇರಿ ಸೊಸೆಗೆ ಎಚ್‌ಐವಿ ಇಂಜೆಕ್ಷನ್!

ಮೂವರ ಶವಗಳು ಹೊರತೆಗೆದ ಪೊಲೀಸರು:

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಡೈವರ್‌ಗಳು ಮತ್ತು ಪೊಲೀಸ್ ತಂಡವು ಗ್ರಾಮಸ್ಥರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿತು. ಗಂಟೆಗಳ ಕಾಲ ನಡೆದ ಶ್ರಮದ ನಂತರ ಮೂವರ ಶವಗಳನ್ನು ನದಿಯಿಂದ ಹೊರತೆಗೆಯಲಾಯಿತು. ಘಟನೆಯಿಂದ ಆಘಾತಕ್ಕೊಳಗಾದ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತು. ಪೊಲೀಸರು ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

ಪ್ರವಾಹವಿದ್ದರೂ ಸುರಕ್ಷತಾ ಕ್ರಮಗಳಿಲ್ಲ:

ನದಿಯ ಈ ಭಾಗದಲ್ಲಿ ಪ್ರವಾಹ ತೀವ್ರವಾಗಿದ್ದು, ಯಾವುದೇ ಸುರಕ್ಷತಾ ಕ್ರಮಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆಡಳಿತಕ್ಕೆ ಸುರಕ್ಷಿತ ದೋಣಿಗಳು ಮತ್ತು ರಕ್ಷಣಾ ಸಾಧನಗಳಿಗಾಗಿ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಶಾಶ್ವತ ವ್ಯವಸ್ಥೆ ಕೈಗೊಳ್ಳಲಾಗಿಲ್ಲ ಎಂದು ಅವರು ದೂರಿದ್ದಾರೆ. ಕೈಸರ್‌ಗಂಜ್ ಪೊಲೀಸ್ ಠಾಣೆಯ ಉಸ್ತುವಾರಿಯವರು ಈ ಘಟನೆಯನ್ನು ದುರಂತ ಎಂದು ಬಣ್ಣಿಸಿದ್ದು, ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ. ದೋಣಿಯ ಕಾರ್ಯಾಚರಣೆಯಲ್ಲಿ ಯಾವುದೇ ನಿರ್ಲಕ್ಷ್ಯವಿದೆಯೇ ಎಂದು ತನಿಖೆಯನ್ನು ಆರಂಭಿಸಲಾಗಿದೆ.

ಇದನ್ನೂ ಓದಿ: ವರನ ವಿಚಿತ್ರ ಬೇಡಿಕೆಗೆ ಬೇಸತ್ತು ಮದುವೆಗೆ ಮೊದಲೇ ಹೆಣವಾದ ನವವಧು! ವರದಕ್ಷಿಣೆಯಾಗಿ ಭೂಪ ಕೇಳಿದ್ದೇನು ಗೊತ್ತಾ?

ಗ್ರಾಮಸ್ಥರು ಮತ್ತು ಸ್ಥಳೀಯರು ಆಡಳಿತದಿಂದ ನದಿಯ ಈ ಭಾಗದಲ್ಲಿ ಸುರಕ್ಷಿತ ದೋಣಿಗಳು, ಲೈಫ್ ಜಾಕೆಟ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ. ಈ ದುರಂತವು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಅಗತ್ಯವನ್ನು ಎತ್ತಿ ತೋರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೈಸೂರು: ಬಲೂನ್ ಹೀಲಿಯಂ ಸಿಲಿಂಡರ್ ಸ್ಫೋಟ; ಮೃತ ಸಲೀಂ ವಿರುದ್ಧ ಎಫ್‌ಐಆರ್ ದಾಖಲು
4.7 ಮಹಿಳಾ ಸ್ನೇಹಿ ರೇಟಿಂಗ್ ಹೊಂದಿದ್ದ ಕಂಪನಿ ಸಿಇಒನಿಂದಲೇ ಉದ್ಯೋಗಿಯ ಗ್ಯಾಂಗ್‌ರೇ*ಪ್ : ಮಹಿಳೆಯೂ ಆರೋಪಿ